ಜಿಲ್ಲೆಗಳು

ಕೋಳಿ ತಿನ್ನಲು ಬಂದ ಚಿರತೆ ಬೋನಿಗೆ ಬಿತ್ತು…

ತಿ. ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಒಂದು ಚಿರತೆ ಬೋನಿಗೆ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ

ಮೈಸೂರು: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ.ನರಸೀಪುರ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದ್ದುಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ.
ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಇರಿಸಲಾಗಿದ್ದ ಕೋಳಿಯನ್ನು ತಿನ್ನಲು ಬಂದ ಚಿರತೆ ರಾತ್ರಿ ಎಂಟು ಗಂಟೆ ವೇಳೆಗೆ ಸೆರೆಯಾಗಿದೆ.
ಕಳೆದ 20 ದಿನಗಳಿಂದಲೂ ಗ್ರಾಮದಲ್ಲಿ ಚಿರತೆ ಓಡಾಡುತ್ತಿತ್ತು. ಈ ಸಂಬಂಧ ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಚಿರತೆ ಸೆರೆಗೆ ಬೋನು ಇಟ್ಟಿತ್ತು.


ಬೋನಿನೊಳಗೆ ಮತ್ತೊಂದು ಕಂಪಾರ್ಟ್ ಮೆಂಟಿನಲ್ಲಿ ಕೋಳಿಯನ್ನು ಕಟ್ಟಿ ಚಿರತೆ ಬೇಟೆಗೆ ಬಲೆ ಬೀಸಲಾಗಿತ್ತು. ಬುಧವಾರ ರಾತ್ರಿ 8 ರ ಸಮಯದಲ್ಲಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಬೋನಿನೊಳಗೆ ಬಂಧಿಯಾಗಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಚಿರತೆಯನ್ನು ರಕ್ಷಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅರಣ್ಯಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಸೆರೆ ಸಿಕ್ಕ ಚಿರತೆಗೆ ಕಾಲರ್ ಐಡಿ ಅಳವಡಿಸಿ ಮತ್ತೆ ಅರಣ್ಯಕ್ಕೆ ಬಿಡುವ ಸಾಧ್ಯತೆ ಇದ್ದು ಚಿರತೆ ಚಲನ ವಲನಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲು ಮತ್ತು ಈ ಭಾಗದಲ್ಲಿ ಎಷ್ಟು ಚಿರತೆಗಳಿವೆ ಎಂದು ಪತ್ತೆ ಹಚ್ಚಲು ಇದು ನೆರವಾಗಲಿದೆ.
ಕಳೆದ ಎರಡು ತಿಂಗಳಿನಿಂದ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ವಿಪರೀತವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ನಿನ್ನೆಯಷ್ಟೇ ಬನ್ನೂರು ಗೊರವನಹಳ್ಳಿಯಲ್ಲಿ ರೈತನ ಮೇಲೆ ಚಿರತೆ ದಾಳಿ ಮಾಡಿತ್ತು. ಡಿ. ಮೂರರಂದು ಬನ್ನೂರಿನ ಬಸವನಹಳ್ಳಿಯ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಆದರೆ ಅದರ ತಾಯಿಯನ್ನು ಸೆರೆ ಹಿಡಿಯುವ ಪ್ರಯತ್ನ ಇನ್ನೂ ಸಫಲವಾಗಿಲ್ಲ
ಕಳೆದ ಎರಡು ತಿಂಗಳಿಂದಲೂ ಬೋನುಗಳನ್ನು ಅಳವಡಿಸಿ ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸಲಾಗಿದೆ. ಆದರೆ ಇದುವರೆಗೆ ಮೂರು ಮರಿ ಚಿರತೆಗಳು ಮತ್ತು ಒಂದು ಚಿರತೆಯಷ್ಟೇ ಸೆರೆ ಸಿಕ್ಕಿವೆ.

andolanait

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

5 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

6 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

6 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

6 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

6 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

6 hours ago