ಜಿಲ್ಲೆಗಳು

ಕೋಳಿ ತಿನ್ನಲು ಬಂದ ಚಿರತೆ ಬೋನಿಗೆ ಬಿತ್ತು…

ತಿ. ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಒಂದು ಚಿರತೆ ಬೋನಿಗೆ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ

ಮೈಸೂರು: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ.ನರಸೀಪುರ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದ್ದುಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ.
ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಇರಿಸಲಾಗಿದ್ದ ಕೋಳಿಯನ್ನು ತಿನ್ನಲು ಬಂದ ಚಿರತೆ ರಾತ್ರಿ ಎಂಟು ಗಂಟೆ ವೇಳೆಗೆ ಸೆರೆಯಾಗಿದೆ.
ಕಳೆದ 20 ದಿನಗಳಿಂದಲೂ ಗ್ರಾಮದಲ್ಲಿ ಚಿರತೆ ಓಡಾಡುತ್ತಿತ್ತು. ಈ ಸಂಬಂಧ ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಚಿರತೆ ಸೆರೆಗೆ ಬೋನು ಇಟ್ಟಿತ್ತು.


ಬೋನಿನೊಳಗೆ ಮತ್ತೊಂದು ಕಂಪಾರ್ಟ್ ಮೆಂಟಿನಲ್ಲಿ ಕೋಳಿಯನ್ನು ಕಟ್ಟಿ ಚಿರತೆ ಬೇಟೆಗೆ ಬಲೆ ಬೀಸಲಾಗಿತ್ತು. ಬುಧವಾರ ರಾತ್ರಿ 8 ರ ಸಮಯದಲ್ಲಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಬೋನಿನೊಳಗೆ ಬಂಧಿಯಾಗಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಚಿರತೆಯನ್ನು ರಕ್ಷಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅರಣ್ಯಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಸೆರೆ ಸಿಕ್ಕ ಚಿರತೆಗೆ ಕಾಲರ್ ಐಡಿ ಅಳವಡಿಸಿ ಮತ್ತೆ ಅರಣ್ಯಕ್ಕೆ ಬಿಡುವ ಸಾಧ್ಯತೆ ಇದ್ದು ಚಿರತೆ ಚಲನ ವಲನಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲು ಮತ್ತು ಈ ಭಾಗದಲ್ಲಿ ಎಷ್ಟು ಚಿರತೆಗಳಿವೆ ಎಂದು ಪತ್ತೆ ಹಚ್ಚಲು ಇದು ನೆರವಾಗಲಿದೆ.
ಕಳೆದ ಎರಡು ತಿಂಗಳಿನಿಂದ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ವಿಪರೀತವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ನಿನ್ನೆಯಷ್ಟೇ ಬನ್ನೂರು ಗೊರವನಹಳ್ಳಿಯಲ್ಲಿ ರೈತನ ಮೇಲೆ ಚಿರತೆ ದಾಳಿ ಮಾಡಿತ್ತು. ಡಿ. ಮೂರರಂದು ಬನ್ನೂರಿನ ಬಸವನಹಳ್ಳಿಯ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಆದರೆ ಅದರ ತಾಯಿಯನ್ನು ಸೆರೆ ಹಿಡಿಯುವ ಪ್ರಯತ್ನ ಇನ್ನೂ ಸಫಲವಾಗಿಲ್ಲ
ಕಳೆದ ಎರಡು ತಿಂಗಳಿಂದಲೂ ಬೋನುಗಳನ್ನು ಅಳವಡಿಸಿ ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸಲಾಗಿದೆ. ಆದರೆ ಇದುವರೆಗೆ ಮೂರು ಮರಿ ಚಿರತೆಗಳು ಮತ್ತು ಒಂದು ಚಿರತೆಯಷ್ಟೇ ಸೆರೆ ಸಿಕ್ಕಿವೆ.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago