ಜಿಲ್ಲೆಗಳು

ಕೋಳಿ ತಿನ್ನಲು ಬಂದ ಚಿರತೆ ಬೋನಿಗೆ ಬಿತ್ತು…

ತಿ. ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಒಂದು ಚಿರತೆ ಬೋನಿಗೆ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ

ಮೈಸೂರು: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ.ನರಸೀಪುರ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದ್ದುಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ.
ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಇರಿಸಲಾಗಿದ್ದ ಕೋಳಿಯನ್ನು ತಿನ್ನಲು ಬಂದ ಚಿರತೆ ರಾತ್ರಿ ಎಂಟು ಗಂಟೆ ವೇಳೆಗೆ ಸೆರೆಯಾಗಿದೆ.
ಕಳೆದ 20 ದಿನಗಳಿಂದಲೂ ಗ್ರಾಮದಲ್ಲಿ ಚಿರತೆ ಓಡಾಡುತ್ತಿತ್ತು. ಈ ಸಂಬಂಧ ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಚಿರತೆ ಸೆರೆಗೆ ಬೋನು ಇಟ್ಟಿತ್ತು.


ಬೋನಿನೊಳಗೆ ಮತ್ತೊಂದು ಕಂಪಾರ್ಟ್ ಮೆಂಟಿನಲ್ಲಿ ಕೋಳಿಯನ್ನು ಕಟ್ಟಿ ಚಿರತೆ ಬೇಟೆಗೆ ಬಲೆ ಬೀಸಲಾಗಿತ್ತು. ಬುಧವಾರ ರಾತ್ರಿ 8 ರ ಸಮಯದಲ್ಲಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಬೋನಿನೊಳಗೆ ಬಂಧಿಯಾಗಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಚಿರತೆಯನ್ನು ರಕ್ಷಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅರಣ್ಯಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಸೆರೆ ಸಿಕ್ಕ ಚಿರತೆಗೆ ಕಾಲರ್ ಐಡಿ ಅಳವಡಿಸಿ ಮತ್ತೆ ಅರಣ್ಯಕ್ಕೆ ಬಿಡುವ ಸಾಧ್ಯತೆ ಇದ್ದು ಚಿರತೆ ಚಲನ ವಲನಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲು ಮತ್ತು ಈ ಭಾಗದಲ್ಲಿ ಎಷ್ಟು ಚಿರತೆಗಳಿವೆ ಎಂದು ಪತ್ತೆ ಹಚ್ಚಲು ಇದು ನೆರವಾಗಲಿದೆ.
ಕಳೆದ ಎರಡು ತಿಂಗಳಿನಿಂದ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ವಿಪರೀತವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ನಿನ್ನೆಯಷ್ಟೇ ಬನ್ನೂರು ಗೊರವನಹಳ್ಳಿಯಲ್ಲಿ ರೈತನ ಮೇಲೆ ಚಿರತೆ ದಾಳಿ ಮಾಡಿತ್ತು. ಡಿ. ಮೂರರಂದು ಬನ್ನೂರಿನ ಬಸವನಹಳ್ಳಿಯ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಆದರೆ ಅದರ ತಾಯಿಯನ್ನು ಸೆರೆ ಹಿಡಿಯುವ ಪ್ರಯತ್ನ ಇನ್ನೂ ಸಫಲವಾಗಿಲ್ಲ
ಕಳೆದ ಎರಡು ತಿಂಗಳಿಂದಲೂ ಬೋನುಗಳನ್ನು ಅಳವಡಿಸಿ ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸಲಾಗಿದೆ. ಆದರೆ ಇದುವರೆಗೆ ಮೂರು ಮರಿ ಚಿರತೆಗಳು ಮತ್ತು ಒಂದು ಚಿರತೆಯಷ್ಟೇ ಸೆರೆ ಸಿಕ್ಕಿವೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago