ತಿ. ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಒಂದು ಚಿರತೆ ಬೋನಿಗೆ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ
ಮೈಸೂರು: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ.ನರಸೀಪುರ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದ್ದುಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ.
ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಇರಿಸಲಾಗಿದ್ದ ಕೋಳಿಯನ್ನು ತಿನ್ನಲು ಬಂದ ಚಿರತೆ ರಾತ್ರಿ ಎಂಟು ಗಂಟೆ ವೇಳೆಗೆ ಸೆರೆಯಾಗಿದೆ.
ಕಳೆದ 20 ದಿನಗಳಿಂದಲೂ ಗ್ರಾಮದಲ್ಲಿ ಚಿರತೆ ಓಡಾಡುತ್ತಿತ್ತು. ಈ ಸಂಬಂಧ ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಮುತ್ತತ್ತಿ ಗ್ರಾಮದ ದಿಲೀಪ್ ಎಂಬುವರ ತೋಟದಲ್ಲಿ ಚಿರತೆ ಸೆರೆಗೆ ಬೋನು ಇಟ್ಟಿತ್ತು.
ಬೋನಿನೊಳಗೆ ಮತ್ತೊಂದು ಕಂಪಾರ್ಟ್ ಮೆಂಟಿನಲ್ಲಿ ಕೋಳಿಯನ್ನು ಕಟ್ಟಿ ಚಿರತೆ ಬೇಟೆಗೆ ಬಲೆ ಬೀಸಲಾಗಿತ್ತು. ಬುಧವಾರ ರಾತ್ರಿ 8 ರ ಸಮಯದಲ್ಲಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಬೋನಿನೊಳಗೆ ಬಂಧಿಯಾಗಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಚಿರತೆಯನ್ನು ರಕ್ಷಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅರಣ್ಯಕ್ಕೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಸೆರೆ ಸಿಕ್ಕ ಚಿರತೆಗೆ ಕಾಲರ್ ಐಡಿ ಅಳವಡಿಸಿ ಮತ್ತೆ ಅರಣ್ಯಕ್ಕೆ ಬಿಡುವ ಸಾಧ್ಯತೆ ಇದ್ದು ಚಿರತೆ ಚಲನ ವಲನಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆಯಲು ಮತ್ತು ಈ ಭಾಗದಲ್ಲಿ ಎಷ್ಟು ಚಿರತೆಗಳಿವೆ ಎಂದು ಪತ್ತೆ ಹಚ್ಚಲು ಇದು ನೆರವಾಗಲಿದೆ.
ಕಳೆದ ಎರಡು ತಿಂಗಳಿನಿಂದ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ವಿಪರೀತವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಚಿರತೆ ದಾಳಿಗೆ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ನಿನ್ನೆಯಷ್ಟೇ ಬನ್ನೂರು ಗೊರವನಹಳ್ಳಿಯಲ್ಲಿ ರೈತನ ಮೇಲೆ ಚಿರತೆ ದಾಳಿ ಮಾಡಿತ್ತು. ಡಿ. ಮೂರರಂದು ಬನ್ನೂರಿನ ಬಸವನಹಳ್ಳಿಯ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಆದರೆ ಅದರ ತಾಯಿಯನ್ನು ಸೆರೆ ಹಿಡಿಯುವ ಪ್ರಯತ್ನ ಇನ್ನೂ ಸಫಲವಾಗಿಲ್ಲ
ಕಳೆದ ಎರಡು ತಿಂಗಳಿಂದಲೂ ಬೋನುಗಳನ್ನು ಅಳವಡಿಸಿ ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಚಿರತೆ ಸೆರೆಗೆ ಕಾರ್ಯಾಚರಣೆ ರೂಪಿಸಲಾಗಿದೆ. ಆದರೆ ಇದುವರೆಗೆ ಮೂರು ಮರಿ ಚಿರತೆಗಳು ಮತ್ತು ಒಂದು ಚಿರತೆಯಷ್ಟೇ ಸೆರೆ ಸಿಕ್ಕಿವೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…