ಜಿಲ್ಲೆಗಳು

ಕುರಿ ತಿನ್ನಲು ಬಂದ ಚಿರತೆ ಕೊನೆಗೂ ಬೋನಿಗೆ ಬಿತ್ತು…

ಮದ್ದೂರು: ಹಳೇ ಮೈಸೂರು ಭಾಗದಲ್ಲಿ ಚಿರತೆಗಳ ಉಪಟಳ ಮುಂದುವರಿದಿದೆ. ಮದ್ದೂರು ತಾಲೂಕಿನ ಕುಂದನಕುಪ್ಪೆಯಲ್ಲಿ ಭಾನುವಾರ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಸೆರೆ ಹಿಡಿಯಲಾಗಿದೆ.

ಕುಣಿಗಲ್‌ ತಾಲ್ಲೂಕಿಗೆ ಹೊಂದಿಕೊಂಡಿರುವ ಮದ್ದೂರಿನ ಕೊನೆಯ ಗ್ರಾಮವಾದ ಕುಂದನಕುಪ್ಪೆ ಕೃಷ್ಣೇಗೌಡರ ಕುರಿ ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ ನುಗ್ಗಿತ್ತು. ಬೆಳಿಗ್ಗೆ ಕುರಿ ಕೊಟ್ಟಿಗೆ ಒಳಗೆ ಚಿರತೆಯನ್ನು ಕಂಡ ಕೃಷ್ಣೇಗೌಡರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಕಾರ್ಯಾಚರಣೆ ಆರಂಭಿಸಿದ್ದರು.

ಸುಮಾರು ಐದು ಗಂಟೆಗಳ ಕಾರ್ಯಾಚರಣೆ ನಂತರವೂ ಬೋನಿಗೆ ಬೀಳದಿದ್ದಾಗ ತಜ್ಞರನ್ನು ಕರೆಸಿ ಅರಿವಳಿಕೆ ಇಂಜೆಕ್ಷನ್‌ ಪ್ರಯೋಗಿಸಿ ಚಿರತೆಯನ್ನು ಸೆರೆ ಹಿಡಿಯಲಾಯಿತು. ಚಿರತೆ ಹಾವಳಿಯಿಂದ ಬೇಸತ್ತಿದ್ದ ಜನತೆ ಈಗ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ.

ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು ಐದಾರು ತಿಂಗಳ ಹಿಂದೆ ಮೂರು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು. ಹೊಸದಾಗಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ರೈತರು ಹಗಲು ವೇಳೆ ಕೂಡ ಒಬ್ಬೊಬ್ಬರೇ ತಮ್ಮ ಹೊಲಗದ್ದೆಗಳಿಗೆ ಹೋಗಲು ಹೆದರಿಕೊಳ್ಳುವಂತಾಗಿತ್ತು. ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗ್ರಾಮದ ಹೊರಕ್ಕೆ ಹೋಗಲೂ ಭಯಪಡುತ್ತಿದ್ದರು. ಚಿರತೆಯನ್ನು ಹಿಡಿದು ಈ ಭಾಗದ ಜನರ ಭೀತಿ ದೂರ ಮಾಡಿರುವ ಅರಣ್ಯ ಇಲಾಖೆಗೆ ಗ್ರಾಮದ ಮುಖಂಡ ಕುಂದನ್ ಕುಪ್ಪೆ ಕುಮಾರ್ ಧನ್ಯವಾದ ಸಲ್ಲಿಸಿದ್ದಾರೆ.

andolana

Recent Posts

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

19 mins ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

51 mins ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

1 hour ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

3 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

3 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

3 hours ago