ಜಿಲ್ಲೆಗಳು

ಹೆಣಗಳ ಬೆತ್ತಲೆ ಫೋಟೋ ತೆಗೆಯುತ್ತಿದ್ದ ವಿಕೃತಕಾಮಿಗೆ ನ್ಯಾಯಾಂಗ ಬಂಧನ

ಮಡಿಕೇರಿ: ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮಹಿಳೆಯರ ಮೃತದೇಹದ ಬೆತ್ತಲೆ ಫೋಟೋ ತೆಗೆಯುತ್ತಿದ್ದ ವಿಕೃತಕಾಮಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕಡಗದಾಳು ನಿವಾಸಿ ಸೈಯದ್ (24)ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಮಡಿಕೇರಿಯ ವೃದ್ದೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿ ಪರಾರಿಯಾಗಿದ್ದ ಸೈಯದ್ ತನ್ನ ಪೋನ್ ಅಲ್ಲೇ ಬಿಟ್ಟು ಪರಾರಿಯಾಗಿದ್ದ. ಆತನ ಫೋನ್ ಪರಿಶೀಲಿಸಿದಾಗ ಶವಾಗಾರದಲ್ಲಿದ್ದ ಮಹಿಳೆಯರ ಶವಗಳ ಫೋಟೋ ಪತ್ತೆಯಾಗಿತ್ತು.

ಈ ಬಗ್ಗೆ ತನಿಖೆ ಆರಂಭಿಸಿದ್ದ ಮಡಿಕೇರಿ ನಗರ ಪೊಲೀಸರು ಆರೋಪಿ ವಿರುದ್ಧ ಮಾನಭಂಗ ಪ್ರಕರಣ ದಾಖಲಿಸಿ, ಹುಡುಕಾಟ ಆರಂಭಿಸಿದ್ದರು.
ಸೈಯದ್ ಇತ್ತೀಚೆಗಷ್ಟೆ ಕೆಲಸಕ್ಕೆ ರಾಜೀನಾಮೆ ನೀಡಿದ್ದ. ಸೆಪ್ಟೆಂಬರ್ 22ರಂದು ರಾತ್ರಿ ಸುಮಾರು11 ಗಂಟೆಗೆ 74 ವರ್ಷದ ವೃದ್ಧೆಯ ಮನೆಗೆ ಆಗಮಿಸಿದ ಸೈಯದ್ ಮನೆ ಬಾಗಿಲು ಬಡಿದಿದ್ದಾನೆ. ಬಾಗಿಲು ತೆರೆದಾಕ್ಷಣ ಸೈಯದ್ ಮನೆ ಒಳಗೆ ನುಗ್ಗಿ ಮಾನ ಭಂಗಕ್ಕೆ ಯತ್ನಿಸಿದ್ದಾನೆ. ವೃದ್ಧೆ ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡಿದ್ದು, ಪಕ್ಕದ ಮನೆಯವರು ಹೊರಬರುವಷ್ಟರಲ್ಲಿ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಪರಾರಿಯಾಗುವ ಸಂದರ್ಭದಲ್ಲಿ ಸೈಯದ್ ತನ್ನ ಫೋನನ್ನು ಮನೆಯಲ್ಲೇ ಬಿಟ್ಟು ಹೋಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಮೊಬೈಲ್ ಘೋನನ್ನು ಪರಿಶೀಲಿಸುವ ವೇಳೆ ಆರೋಪಿ ಸೈಯದ್ ಮೃತ ಮಹಿಳೆಯರ ಚಿತ್ರ ತೆಗೆದಿರುವುದು ಬೆಳಕಿಗೆ ಬಂದಿತ್ತು. ಇದೀಗ ಸೈಯದ್ ನನ್ನು ಮಡಿಕೇರಿ ನಗರ ಠಾಣೆ ಪೊಲೀಸರು ಬಂಧಿಸಿ ಸೆಕ್ಷನ್ 445 ಹಾಗೂ 354ರಡಿ ಪ್ರಕರಣ ದಾಖಲಿಸಿದ್ದಾರೆ. ನ್ಯಾಯಾಲಯ ಆರೋಪಿ ಸೈಯದ್ಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆಸ್ಪತ್ರೆಯಲ್ಲಿ ಕರ್ತವ್ಯನಿರತ ಮಹಿಳೆಯರನ್ನೂ ಸೈಯದ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಗಳಿದ್ದು ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

1 hour ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

18 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

20 hours ago