ನಾಗರಹೊಳೆ ಕಬಿನಿ ಹಿನ್ನೀರು ಪ್ರದೇಶದಲ್ಲಿ ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿ ಪ್ರವಾಸಿಗರು
ಮೈಸೂರು: ನಾಗರ ಹೊಳೆ ಅಭಯಾರಣ್ಯದ ಕಬಿನಿ ಹಿನ್ನೀರು ಪ್ರದೇಶದಲ್ಲಿ ಸೀಳು ನಾಯಿಗಳು (Wild Dogs) ಬೇಟೆಯಾಡಿದ ಕಡವೆ ಮರಿಯನ್ನು ಹುಲಿರಾಯ ಎಗರಿಸಿದ ಅಪರೂಪದ ದೃಶ್ಯವನ್ನು ಸಫಾರಿ ಪ್ರವಾಸಿಗರು ಗುರುವಾರ ಕಣ್ತುಂಬಿಕೊಂಡಿದ್ದಾರೆ.
ಡಿ.ಬಿ.ಕುಪ್ಪೆ ಮತ್ತು ಅಂತರಸಂತೆ ವಲಯ ವ್ಯಾಪ್ತಿಗೆ ಸೇರಿದ ಕೈಮರದಿಂದ ಬಿಸಿಲವಾಡಿಗೆ ಹೋಗುವ ಸಫಾರಿ ಹಾದಿಯಲ್ಲಿ ಕಂಡು ಬಂದ ಸುಮಾರು ಮೂರ್ನಾಲ್ಕು ನಿಮಿಷಗಳ ಈ ದೃಶ್ಯ ಸಫಾರಿ ಪ್ರವಾಸಿಗರು ಮಾತ್ರವಲ್ಲ ವನ್ಯಪ್ರೇಮಿಗಳ ಗಮನಸೆಳೆದಿದೆ.
ಸೀಳುನಾಯಿಗಳು ಹುಲಿ, ಚಿರತೆ ಮುಂತಾದ ಪ್ರಾಣಿಗಳ ಬೇಟೆಯನ್ನು ಎಗರಿಸಿ ತಾವು ಭಕ್ಷಿಸುವ ಘಟನೆಗಳು ಸಾಮಾನ್ಯ. ಗುಂಪಿನಲ್ಲಿ ಸಾಗುವ ಸೀಳು ನಾಯಿಗಳು ತಮಗಿಂತ ಬಲಿಷ್ಠವಾದ ಮೃಗಗಳು ಬೇಟೆಯಾಡಿದ ಮಾಂಸವನ್ನು ಉಪಾಯದಿಂದ ಕಬಳಿಸಿ ಹೊತ್ತೊಯ್ಯುತ್ತವೆ. ಆದರೆ ಈ ಕಬಿನಿ ಹಿನ್ನೀರು ಪ್ರದೇಶದಲ್ಲಿ ದಾಖಲಾದ ಘಟನೆಯಲ್ಲಿ ಸೀಳು ನಾಯಿಗಳು ಬೇಟೆಯಾಡಿದ ಕಡವೆ ಮರಿಯನ್ನು ಗಂಡು ಹುಲಿ ಬಂದು ಹೊತ್ತೊಯ್ದು ಭಕ್ಷಿಸಿದೆ.
ಈ ನಡುವೆ ಮರಿಯನ್ನು ಕಳೆದುಕೊಂಡ ಕಡವೆ, ಸೀಳು ನಾಯಿಗಳನ್ನು ಓಡಿಸುವ ಪ್ರಯತ್ನ ಮಾಡಿದರೂ ಸಫಲವಾಗುವುದಿಲ್ಲ. ಒಂದು ನಾಯಿಯನ್ನು ಓಡಿಸುವಷ್ಟರಲ್ಲಿ ಮತ್ತೊಂದು ಕಡೆಯಿಂದ ಸೀಳು ನಾಯಿಗಳು ಮರಿಯ ಮಾಂಸವನ್ನು ಭಕ್ಷಿಸಲಾರಂಭಿಸಿವೆ. ಅಂತಿಮವಾಗಿ ಸ್ಥಳಕ್ಕೆ ಹಾಜರಾದ ಹುಲಿರಾಯ ಕಡವೆ ಮಾಂಸವನ್ನು ಎತ್ತಿಕೊಂಡು ಹೋಗಿದೆ. ಸೀಳು ನಾಯಿಗಳ ಪೆಚ್ಚು ಮೋರೆ ಹಾಕಿಕೊಂಡು ಹುಲಿಯನ್ನು ನೋಡುತ್ತಾ ನಿಂತಿವೆ. ತಾಯಿ ಕಡವೆಯ ರೋದನ ಮುಂದುವರಿದಿದೆ.
ಜಂಗಲ್ ರೆಸಾರ್ಟ್ಸ್ ಬಸ್ಸಿನ ಚಾಲಕ ಸಿ. ಆರ್ . ನಾಗೇಶ್ ಅವರು ಈ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್ ಮೂಲಕ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…