ಜಿಲ್ಲೆಗಳು

ಸೀಳು ನಾಯಿಗಳ ಬೇಟೆ ಹುಲಿರಾಯನ ಪಾಲಾಯಿತು…!

ನಾಗರಹೊಳೆ ಕಬಿನಿ ಹಿನ್ನೀರು ಪ್ರದೇಶದಲ್ಲಿ ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿ ಪ್ರವಾಸಿಗರು

ಮೈಸೂರು: ನಾಗರ ಹೊಳೆ ಅಭಯಾರಣ್ಯದ ಕಬಿನಿ ಹಿನ್ನೀರು ಪ್ರದೇಶದಲ್ಲಿ ಸೀಳು ನಾಯಿಗಳು (Wild Dogs) ಬೇಟೆಯಾಡಿದ ಕಡವೆ ಮರಿಯನ್ನು ಹುಲಿರಾಯ ಎಗರಿಸಿದ ಅಪರೂಪದ ದೃಶ್ಯವನ್ನು ಸಫಾರಿ ಪ್ರವಾಸಿಗರು ಗುರುವಾರ ಕಣ್ತುಂಬಿಕೊಂಡಿದ್ದಾರೆ.

ಡಿ.ಬಿ.ಕುಪ್ಪೆ ಮತ್ತು ಅಂತರಸಂತೆ ವಲಯ ವ್ಯಾಪ್ತಿಗೆ ಸೇರಿದ ಕೈಮರದಿಂದ ಬಿಸಿಲವಾಡಿಗೆ ಹೋಗುವ ಸಫಾರಿ ಹಾದಿಯಲ್ಲಿ ಕಂಡು ಬಂದ ಸುಮಾರು ಮೂರ್ನಾಲ್ಕು ನಿಮಿಷಗಳ ಈ ದೃಶ್ಯ ಸಫಾರಿ ಪ್ರವಾಸಿಗರು ಮಾತ್ರವಲ್ಲ ವನ್ಯಪ್ರೇಮಿಗಳ ಗಮನಸೆಳೆದಿದೆ.

ಸೀಳುನಾಯಿಗಳು ಹುಲಿ, ಚಿರತೆ ಮುಂತಾದ ಪ್ರಾಣಿಗಳ ಬೇಟೆಯನ್ನು ಎಗರಿಸಿ ತಾವು ಭಕ್ಷಿಸುವ ಘಟನೆಗಳು ಸಾಮಾನ್ಯ. ಗುಂಪಿನಲ್ಲಿ ಸಾಗುವ ಸೀಳು ನಾಯಿಗಳು ತಮಗಿಂತ ಬಲಿಷ್ಠವಾದ ಮೃಗಗಳು ಬೇಟೆಯಾಡಿದ ಮಾಂಸವನ್ನು ಉಪಾಯದಿಂದ ಕಬಳಿಸಿ ಹೊತ್ತೊಯ್ಯುತ್ತವೆ. ಆದರೆ ಈ ಕಬಿನಿ ಹಿನ್ನೀರು ಪ್ರದೇಶದಲ್ಲಿ ದಾಖಲಾದ ಘಟನೆಯಲ್ಲಿ ಸೀಳು ನಾಯಿಗಳು ಬೇಟೆಯಾಡಿದ ಕಡವೆ ಮರಿಯನ್ನು ಗಂಡು ಹುಲಿ ಬಂದು ಹೊತ್ತೊಯ್ದು ಭಕ್ಷಿಸಿದೆ.

ಈ ನಡುವೆ ಮರಿಯನ್ನು ಕಳೆದುಕೊಂಡ ಕಡವೆ, ಸೀಳು ನಾಯಿಗಳನ್ನು ಓಡಿಸುವ ಪ್ರಯತ್ನ ಮಾಡಿದರೂ ಸಫಲವಾಗುವುದಿಲ್ಲ. ಒಂದು ನಾಯಿಯನ್ನು ಓಡಿಸುವಷ್ಟರಲ್ಲಿ ಮತ್ತೊಂದು ಕಡೆಯಿಂದ ಸೀಳು ನಾಯಿಗಳು ಮರಿಯ ಮಾಂಸವನ್ನು ಭಕ್ಷಿಸಲಾರಂಭಿಸಿವೆ. ಅಂತಿಮವಾಗಿ ಸ್ಥಳಕ್ಕೆ ಹಾಜರಾದ ಹುಲಿರಾಯ ಕಡವೆ ಮಾಂಸವನ್ನು ಎತ್ತಿಕೊಂಡು ಹೋಗಿದೆ. ಸೀಳು ನಾಯಿಗಳ ಪೆಚ್ಚು ಮೋರೆ ಹಾಕಿಕೊಂಡು ಹುಲಿಯನ್ನು ನೋಡುತ್ತಾ ನಿಂತಿವೆ. ತಾಯಿ ಕಡವೆಯ ರೋದನ ಮುಂದುವರಿದಿದೆ.

ಜಂಗಲ್‌ ರೆಸಾರ್ಟ್ಸ್‌ ಬಸ್ಸಿನ ಚಾಲಕ ಸಿ. ಆರ್ . ನಾಗೇಶ್ ಅವರು ಈ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್‌ ಮೂಲಕ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

andolanait

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

2 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

4 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

6 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

6 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

7 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

11 hours ago