ನಗರದ ವಿವಿಧೆಡೆ ‘ಮೈಸೂರು ಗ್ರಾಹಕರ ಪರಿಷತ್’ ಬೆಂಬಲಿತರ ಮೌನ ಪ್ರತಿಭಟನೆ
ಮೈಸೂರು: ಉತ್ತಮ ಆಡಳಿತಕ್ಕಾಗಿ ಸಾರ್ವಜನಿಕರನ್ನು ‘ಯಜಮಾನರು’ ಎಂದು ಪರಿಗಣಿಸಬೇಕು ಎಂಬುದೂ ಸೇರಿದಂತೆ ನಗರದ ನಾಗರಿಕ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನ ಸೆಳೆಯಲು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ‘ಮೈಸೂರು ಗ್ರಾಹಕರ ಪರಿಷತ್’ ವತಿಯಿಂದ ಉತ್ತಮ ಆಡಳಿತಕ್ಕಾಗಿ ಕರೆ ನೀಡಿದ ಸತ್ಯಾಗ್ರಹ ಯಶಸ್ವಿಯಾಗಿ ನಡೆಯಿತು.
ಭಾನುವಾರ ನಗರದ ಚೆಲುವಾಂಬ ಪಾರ್ಕ್ನಲ್ಲಿ ಹೋರಾಟಗಾರ ಭಾಮಿನಿ ವಿ.ಶೆಣೈ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತು. ಜತೆಗೆ ವಿವಿಧ ಬಡಾವಣೆಗಳಾದ ಯಾದವಗಿರಿ, ಒಂಟಿಕೊಪ್ಪಲು, ಜಯಲಕ್ಷ್ಮೀಪುರಂ, ವಿಜಯನಗರ 4ನೇ ಬ್ಲಾಕ್ ಪಾರ್ಕ್ನಲ್ಲಿ, ವಿಜಯನಗರ 3ನೇ ಹಂತದ ಪಾರ್ಕ್, ಮಧುವನ ಪಾರ್ಕ್, ಜಯನಗರ ಪಾರ್ಕ್, ಎನ್.ಆರ್ ಮೊಹಲ್ಲಾದ ಶಿವಾಜಿ ಪಾರ್ಕ್ನಲ್ಲಿ, ಸಾತಗಳ್ಳಿಯ ಲರ್ನರ್ ಪಿಯು ಕಾಲೇಜು, ನ್ಯಾಯಾಲಯದ ಮುಂಭಾಗ ಸೇರಿದಂತೆ 9ಕಡೆಗಳಲ್ಲಿ ತಮ್ಮ ಹೊಣೆಗಾರಿಕೆಯನ್ನು ಅರಿತು ನಾಗರಿಕರು ಸತ್ಯಾಗ್ರಹ ನಡೆಸಿದರು.
ಚಾಮುಂಡಿಬೆಟ್ಟದಲ್ಲಿನ ಪ್ರಾಣಿ-ಪಕ್ಷಿಗಳ ಹಿತ ದೃಷ್ಟಿಯಿಂದ ಅವೈಜ್ಞಾನಿಕವಾದ ವಾಣಿಜ್ಯೀಕರಣದ ಕಾಮಗಾರಿ ಮಾಡುವುದು ಬೇಡ. ಕೂಡಲೇ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಬೇಕು. ಉದ್ಯಾನವನ ಕಾಯಿದೆ ಮತ್ತು ಕಾನೂನಿನ ಆದೇಶವನ್ನು ಮೀರಿ ಕಟ್ಟಡ ಕಾಮಗಾರಿ ಮಾಡುತ್ತಿದ್ದು, ಕೂಡಲೇ ನಿಲ್ಲಿಸಿ ಇಲ್ಲವಾದರೆ ಪರಿಸರ ವಾದಿಗಳು ಎಲ್ಲ ಅಧಿಕಾರಿಗಳ ಮೇಲೆ ನ್ಯಾಯಾಲಯದಲ್ಲಿ ಪಿಐಎಲ್ ಹೂಡಬೇಕಾಗುತ್ತದೆ ಎಂದು ಪರಿಸರವಾದಿ ಭಾನು ಮೋಹನ್ ನಗರದ ನ್ಯಾಯಾಲಯದ ಮುಂಭಾಗ ಪ್ಲೇ ಕಾರ್ಡ್ ಹಿಡಿದು ಸತ್ಯಾಗ್ರಹ ನಡೆಸಿದರು.
ಮೈಸೂರು ಗ್ರಾಹಕರ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ, ಪರಿಷತ್ ಅಧ್ಯಕ್ಷರಾದ ಶ್ರೀಶೈಲ ರಾಮಣ್ಣನವರ್, ಶಂಕರ್, ಶೋಭಾನಾ, ಮೇಜರ್ ಜನರಲ್ ಸುಧೀರ್ ಓಂಭತ್ಕೇರೆ, ಸಿಎಫ್ಟಿಆರ್ಐ ನಿವೃತ್ತ ನಿರ್ದೇಶಕ ಡಾ.ವಿ.ಪ್ರಕಾಶ್, ಪ್ಲಾಸ್ಟಿಕ್ ಸರ್ಜನ್ ಡಾ.ಜಯರಾಮ್, ಡಾ.ನಂಜಪೂರ್ ಯದುರಾಜ್, ಗೀತಾ ಮೇಲುಮನಿ, ಪ್ರೊ.ದ್ವಾರಕಿ, ಅರುಣ್ ಕುಮಾರ್ ಶೆಟ್ಟರ , ರಾಕೇಶ್ , ಮುನಿರ್, ಮುರುಳಿ ಮೋಹನ್, ಕೊ.ಸು.ನರಸಿಂಹಮೂರ್ತಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. ಅನೇಕರು ಪರೋಕ್ಷವಾಗಿ ಬೆಂಬಲ ನೀಡಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…