ನಗರದ ವಿವಿಧೆಡೆ ‘ಮೈಸೂರು ಗ್ರಾಹಕರ ಪರಿಷತ್’ ಬೆಂಬಲಿತರ ಮೌನ ಪ್ರತಿಭಟನೆ
ಮೈಸೂರು: ಉತ್ತಮ ಆಡಳಿತಕ್ಕಾಗಿ ಸಾರ್ವಜನಿಕರನ್ನು ‘ಯಜಮಾನರು’ ಎಂದು ಪರಿಗಣಿಸಬೇಕು ಎಂಬುದೂ ಸೇರಿದಂತೆ ನಗರದ ನಾಗರಿಕ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನ ಸೆಳೆಯಲು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ‘ಮೈಸೂರು ಗ್ರಾಹಕರ ಪರಿಷತ್’ ವತಿಯಿಂದ ಉತ್ತಮ ಆಡಳಿತಕ್ಕಾಗಿ ಕರೆ ನೀಡಿದ ಸತ್ಯಾಗ್ರಹ ಯಶಸ್ವಿಯಾಗಿ ನಡೆಯಿತು.
ಭಾನುವಾರ ನಗರದ ಚೆಲುವಾಂಬ ಪಾರ್ಕ್ನಲ್ಲಿ ಹೋರಾಟಗಾರ ಭಾಮಿನಿ ವಿ.ಶೆಣೈ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತು. ಜತೆಗೆ ವಿವಿಧ ಬಡಾವಣೆಗಳಾದ ಯಾದವಗಿರಿ, ಒಂಟಿಕೊಪ್ಪಲು, ಜಯಲಕ್ಷ್ಮೀಪುರಂ, ವಿಜಯನಗರ 4ನೇ ಬ್ಲಾಕ್ ಪಾರ್ಕ್ನಲ್ಲಿ, ವಿಜಯನಗರ 3ನೇ ಹಂತದ ಪಾರ್ಕ್, ಮಧುವನ ಪಾರ್ಕ್, ಜಯನಗರ ಪಾರ್ಕ್, ಎನ್.ಆರ್ ಮೊಹಲ್ಲಾದ ಶಿವಾಜಿ ಪಾರ್ಕ್ನಲ್ಲಿ, ಸಾತಗಳ್ಳಿಯ ಲರ್ನರ್ ಪಿಯು ಕಾಲೇಜು, ನ್ಯಾಯಾಲಯದ ಮುಂಭಾಗ ಸೇರಿದಂತೆ 9ಕಡೆಗಳಲ್ಲಿ ತಮ್ಮ ಹೊಣೆಗಾರಿಕೆಯನ್ನು ಅರಿತು ನಾಗರಿಕರು ಸತ್ಯಾಗ್ರಹ ನಡೆಸಿದರು.
ಚಾಮುಂಡಿಬೆಟ್ಟದಲ್ಲಿನ ಪ್ರಾಣಿ-ಪಕ್ಷಿಗಳ ಹಿತ ದೃಷ್ಟಿಯಿಂದ ಅವೈಜ್ಞಾನಿಕವಾದ ವಾಣಿಜ್ಯೀಕರಣದ ಕಾಮಗಾರಿ ಮಾಡುವುದು ಬೇಡ. ಕೂಡಲೇ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಬೇಕು. ಉದ್ಯಾನವನ ಕಾಯಿದೆ ಮತ್ತು ಕಾನೂನಿನ ಆದೇಶವನ್ನು ಮೀರಿ ಕಟ್ಟಡ ಕಾಮಗಾರಿ ಮಾಡುತ್ತಿದ್ದು, ಕೂಡಲೇ ನಿಲ್ಲಿಸಿ ಇಲ್ಲವಾದರೆ ಪರಿಸರ ವಾದಿಗಳು ಎಲ್ಲ ಅಧಿಕಾರಿಗಳ ಮೇಲೆ ನ್ಯಾಯಾಲಯದಲ್ಲಿ ಪಿಐಎಲ್ ಹೂಡಬೇಕಾಗುತ್ತದೆ ಎಂದು ಪರಿಸರವಾದಿ ಭಾನು ಮೋಹನ್ ನಗರದ ನ್ಯಾಯಾಲಯದ ಮುಂಭಾಗ ಪ್ಲೇ ಕಾರ್ಡ್ ಹಿಡಿದು ಸತ್ಯಾಗ್ರಹ ನಡೆಸಿದರು.
ಮೈಸೂರು ಗ್ರಾಹಕರ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ, ಪರಿಷತ್ ಅಧ್ಯಕ್ಷರಾದ ಶ್ರೀಶೈಲ ರಾಮಣ್ಣನವರ್, ಶಂಕರ್, ಶೋಭಾನಾ, ಮೇಜರ್ ಜನರಲ್ ಸುಧೀರ್ ಓಂಭತ್ಕೇರೆ, ಸಿಎಫ್ಟಿಆರ್ಐ ನಿವೃತ್ತ ನಿರ್ದೇಶಕ ಡಾ.ವಿ.ಪ್ರಕಾಶ್, ಪ್ಲಾಸ್ಟಿಕ್ ಸರ್ಜನ್ ಡಾ.ಜಯರಾಮ್, ಡಾ.ನಂಜಪೂರ್ ಯದುರಾಜ್, ಗೀತಾ ಮೇಲುಮನಿ, ಪ್ರೊ.ದ್ವಾರಕಿ, ಅರುಣ್ ಕುಮಾರ್ ಶೆಟ್ಟರ , ರಾಕೇಶ್ , ಮುನಿರ್, ಮುರುಳಿ ಮೋಹನ್, ಕೊ.ಸು.ನರಸಿಂಹಮೂರ್ತಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. ಅನೇಕರು ಪರೋಕ್ಷವಾಗಿ ಬೆಂಬಲ ನೀಡಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…