ನಗರದ ವಿವಿಧೆಡೆ ‘ಮೈಸೂರು ಗ್ರಾಹಕರ ಪರಿಷತ್’ ಬೆಂಬಲಿತರ ಮೌನ ಪ್ರತಿಭಟನೆ
ಮೈಸೂರು: ಉತ್ತಮ ಆಡಳಿತಕ್ಕಾಗಿ ಸಾರ್ವಜನಿಕರನ್ನು ‘ಯಜಮಾನರು’ ಎಂದು ಪರಿಗಣಿಸಬೇಕು ಎಂಬುದೂ ಸೇರಿದಂತೆ ನಗರದ ನಾಗರಿಕ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನ ಸೆಳೆಯಲು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ‘ಮೈಸೂರು ಗ್ರಾಹಕರ ಪರಿಷತ್’ ವತಿಯಿಂದ ಉತ್ತಮ ಆಡಳಿತಕ್ಕಾಗಿ ಕರೆ ನೀಡಿದ ಸತ್ಯಾಗ್ರಹ ಯಶಸ್ವಿಯಾಗಿ ನಡೆಯಿತು.
ಭಾನುವಾರ ನಗರದ ಚೆಲುವಾಂಬ ಪಾರ್ಕ್ನಲ್ಲಿ ಹೋರಾಟಗಾರ ಭಾಮಿನಿ ವಿ.ಶೆಣೈ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತು. ಜತೆಗೆ ವಿವಿಧ ಬಡಾವಣೆಗಳಾದ ಯಾದವಗಿರಿ, ಒಂಟಿಕೊಪ್ಪಲು, ಜಯಲಕ್ಷ್ಮೀಪುರಂ, ವಿಜಯನಗರ 4ನೇ ಬ್ಲಾಕ್ ಪಾರ್ಕ್ನಲ್ಲಿ, ವಿಜಯನಗರ 3ನೇ ಹಂತದ ಪಾರ್ಕ್, ಮಧುವನ ಪಾರ್ಕ್, ಜಯನಗರ ಪಾರ್ಕ್, ಎನ್.ಆರ್ ಮೊಹಲ್ಲಾದ ಶಿವಾಜಿ ಪಾರ್ಕ್ನಲ್ಲಿ, ಸಾತಗಳ್ಳಿಯ ಲರ್ನರ್ ಪಿಯು ಕಾಲೇಜು, ನ್ಯಾಯಾಲಯದ ಮುಂಭಾಗ ಸೇರಿದಂತೆ 9ಕಡೆಗಳಲ್ಲಿ ತಮ್ಮ ಹೊಣೆಗಾರಿಕೆಯನ್ನು ಅರಿತು ನಾಗರಿಕರು ಸತ್ಯಾಗ್ರಹ ನಡೆಸಿದರು.
ಚಾಮುಂಡಿಬೆಟ್ಟದಲ್ಲಿನ ಪ್ರಾಣಿ-ಪಕ್ಷಿಗಳ ಹಿತ ದೃಷ್ಟಿಯಿಂದ ಅವೈಜ್ಞಾನಿಕವಾದ ವಾಣಿಜ್ಯೀಕರಣದ ಕಾಮಗಾರಿ ಮಾಡುವುದು ಬೇಡ. ಕೂಡಲೇ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಬೇಕು. ಉದ್ಯಾನವನ ಕಾಯಿದೆ ಮತ್ತು ಕಾನೂನಿನ ಆದೇಶವನ್ನು ಮೀರಿ ಕಟ್ಟಡ ಕಾಮಗಾರಿ ಮಾಡುತ್ತಿದ್ದು, ಕೂಡಲೇ ನಿಲ್ಲಿಸಿ ಇಲ್ಲವಾದರೆ ಪರಿಸರ ವಾದಿಗಳು ಎಲ್ಲ ಅಧಿಕಾರಿಗಳ ಮೇಲೆ ನ್ಯಾಯಾಲಯದಲ್ಲಿ ಪಿಐಎಲ್ ಹೂಡಬೇಕಾಗುತ್ತದೆ ಎಂದು ಪರಿಸರವಾದಿ ಭಾನು ಮೋಹನ್ ನಗರದ ನ್ಯಾಯಾಲಯದ ಮುಂಭಾಗ ಪ್ಲೇ ಕಾರ್ಡ್ ಹಿಡಿದು ಸತ್ಯಾಗ್ರಹ ನಡೆಸಿದರು.
ಮೈಸೂರು ಗ್ರಾಹಕರ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ, ಪರಿಷತ್ ಅಧ್ಯಕ್ಷರಾದ ಶ್ರೀಶೈಲ ರಾಮಣ್ಣನವರ್, ಶಂಕರ್, ಶೋಭಾನಾ, ಮೇಜರ್ ಜನರಲ್ ಸುಧೀರ್ ಓಂಭತ್ಕೇರೆ, ಸಿಎಫ್ಟಿಆರ್ಐ ನಿವೃತ್ತ ನಿರ್ದೇಶಕ ಡಾ.ವಿ.ಪ್ರಕಾಶ್, ಪ್ಲಾಸ್ಟಿಕ್ ಸರ್ಜನ್ ಡಾ.ಜಯರಾಮ್, ಡಾ.ನಂಜಪೂರ್ ಯದುರಾಜ್, ಗೀತಾ ಮೇಲುಮನಿ, ಪ್ರೊ.ದ್ವಾರಕಿ, ಅರುಣ್ ಕುಮಾರ್ ಶೆಟ್ಟರ , ರಾಕೇಶ್ , ಮುನಿರ್, ಮುರುಳಿ ಮೋಹನ್, ಕೊ.ಸು.ನರಸಿಂಹಮೂರ್ತಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. ಅನೇಕರು ಪರೋಕ್ಷವಾಗಿ ಬೆಂಬಲ ನೀಡಿದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…