ಜಿಲ್ಲೆಗಳು

ಹದಿನಾರು ಕೆರೆಯಲ್ಲಿ ಹೆಬ್ಬಾತುಗಳ ಕಲರವ

ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ ಅವುಗಳ ಚಿತ್ರವನ್ನು ಸೆರೆಹಿಡಿದಿದ್ದಾರೆ.


ದೂರದ ಯುರೋಪ್, ಮಂಗೋಲಿಯಾ ಹಾಗೂ ಸೈಬೀರಿಯಾ ಮೂಲದಿಂದ ಈ ಹಕ್ಕಿಗಳು ಪಟ್ಟೆತಲೆ ಹೆಬ್ಬಾತುಗಳೊಂದಿಗೆ ಭಾರತಕ್ಕೆ ಬರುತ್ತವೆ. ಆದರೆ ಈ ಬಾರಿ ವಿಶೇಷವಾಗಿ ವನ್ಯಜೀವಿ ಛಾಯಾಗ್ರಾಹಕರು ನಂಜನಗೂಡಿನ ಹದಿನಾರು ಕೆರೆಯಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತುಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಹೆಬ್ಬಾತುಗಳನ್ನು ಈ ಬಾರ್ ಹೆಡೆಡ್ ಗೂಸ್ ಹಕ್ಕಿಗಳ ಮಧ್ಯೆ ಗುರುತಿಸಿ ಅದರ ಚಿತ್ರವನ್ನು ಸೆರೆಹಿಡಿದಿದ್ದಾರೆ.

ಮೈಸೂರಿನ ಪಕ್ಷಿ ವೀಕ್ಷಕ ಸ್ನೇಕ್ ಶಿವು, ಮತ್ತು ಎಚ್.ಎಸ್.ಸುರೇಂದ್ರ ಎಂಬವರು ಈ ಅಪರೂಪದ ಹಕ್ಕಿಯನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

andolanait

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

20 mins ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

44 mins ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

1 hour ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

2 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

5 hours ago