ಜಿಲ್ಲೆಗಳು

ಹದಿನಾರು ಕೆರೆಯಲ್ಲಿ ಹೆಬ್ಬಾತುಗಳ ಕಲರವ

ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ ಅವುಗಳ ಚಿತ್ರವನ್ನು ಸೆರೆಹಿಡಿದಿದ್ದಾರೆ.


ದೂರದ ಯುರೋಪ್, ಮಂಗೋಲಿಯಾ ಹಾಗೂ ಸೈಬೀರಿಯಾ ಮೂಲದಿಂದ ಈ ಹಕ್ಕಿಗಳು ಪಟ್ಟೆತಲೆ ಹೆಬ್ಬಾತುಗಳೊಂದಿಗೆ ಭಾರತಕ್ಕೆ ಬರುತ್ತವೆ. ಆದರೆ ಈ ಬಾರಿ ವಿಶೇಷವಾಗಿ ವನ್ಯಜೀವಿ ಛಾಯಾಗ್ರಾಹಕರು ನಂಜನಗೂಡಿನ ಹದಿನಾರು ಕೆರೆಯಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತುಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ ಹೆಬ್ಬಾತುಗಳನ್ನು ಈ ಬಾರ್ ಹೆಡೆಡ್ ಗೂಸ್ ಹಕ್ಕಿಗಳ ಮಧ್ಯೆ ಗುರುತಿಸಿ ಅದರ ಚಿತ್ರವನ್ನು ಸೆರೆಹಿಡಿದಿದ್ದಾರೆ.

ಮೈಸೂರಿನ ಪಕ್ಷಿ ವೀಕ್ಷಕ ಸ್ನೇಕ್ ಶಿವು, ಮತ್ತು ಎಚ್.ಎಸ್.ಸುರೇಂದ್ರ ಎಂಬವರು ಈ ಅಪರೂಪದ ಹಕ್ಕಿಯನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

andolanait

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

1 hour ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

2 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

7 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

7 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

7 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

7 hours ago