ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ.
ನಗರದ ಜೆಎಲ್ಬಿ ರಸ್ತೆಯಲ್ಲಿರುವ ಇಂಜಿನಿಯರ್ ಸಂಸ್ಥೆ ಸಭಾಂಗಣದಲ್ಲಿ ಸಭೆ ಸೇರಿದ ಸಮಿತಿ ಸದಸ್ಯರು ಹಾಗೂ ಹಲವು ಸಂಘಟನೆಗಳ ಮುಖಂಡರು, ಚಾಮುಂಡಿಬೆಟ್ಟದ ಮೇಲೆ ನಡೆಯುತ್ತಿರುವ ಕಾಮಗಾರಿಗಳು ಇದೇ ರೀತಿ ಮುಂದುವರೆದರೆ ಬೆಟ್ಟದ ಪಾವಿತ್ರತೆ ಹಾಳಾಗುವುದರ ಜೊತೆಗೆ ಸಾಕಷ್ಟು ಹಾನಿಯುಂಟಾಗಲಿದೆ. ಹಾಗಾಗಿ,ಚಾಮುಂಡಿಬೆಟ್ಟವನ್ನು ಇರುವಂತೆೆಯೇ ಉಳಿಸಿಕೊಳ್ಳಲು ಹೋರಾಟ ಅಗತ್ಯ ಎಂದರು.
ದೇವಿಕೆರೆಗೆ ಹೊಸರೂಪ ನೀಡುತ್ತೇವೆಂದು ಜೆಸಿಬಿಗಳಿಂದ ಹೂಳೆತ್ತಿಸುತ್ತಿದ್ದಾರೆ. ಇದರಿಂದ ಬೆಟ್ಟ ಇನ್ನಷ್ಟು ಸಡಿಲವಾಗುವ ಸಾಧ್ಯತೆ ಇದೆ. ಚಾಮುಂಡಿಬೆಟ್ಟದ ಉಳಿವಿಗಾಗಿ ಪೂರ್ವ ತ ಇನ್ನೆರಡು ದಿನಗಳಿಂದ ಹೋರಾಟ ಆರಂಭಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿದೆ ಎಂದರು. ಮೈಸೂರು ಗ್ರಾಹಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ ಮಾತನಾಡಿ, ಚಾಮುಂಡಿ ಬೆಟ್ಟ ಉಳಿಸಬೇಕಾದರೆ ನಿರಂತರ ಹೋರಾಟ ಅವಶ್ಯವಾಗಿದೆ ಎಂದರು.
ಪ್ರೊ.ಕೆ.ಕಾಳಚೆನ್ನೇಗೌಡ ಮಾತನಾಡಿ, ಪ್ರಸಾದ ಯೋಜನೆ ಹೆಸರಿನಲ್ಲಿ ಚಾಮುಂಡಿದ ಮೇಲೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳು ನಿಲ್ಲಬೇಕು. ಜನಪ್ರತಿನಿಧಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಅಧಿಕಾರಿಗಳಿಗೆ ಪರಿಸರ ಜ್ಞಾನ ಇರುವುದಿಲ್ಲ. ಆದ್ದರಿಂದ ಸಾಧ್ಯವಾದರೆ ಕಾನೂನು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.
ಇತಿಹಾಸ ತಜ್ಞ ಪ್ರೊ.ರಂಗರಾಜು ಮಾತನಾಡಿ, ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆ ಉಳಿಯಬೇಕಾದರೆ ಮೈಸೂರು ಬಂದ್ ಮಾದರಿಯಲ್ಲಿ ಪ್ರತಿಭಟನೆ ನಡೆಸಬೇಕು. ಬೆಟ್ಟದ ಇತಿಹಾಸ ಅರಿಯದೆ ಎಲ್ಲೆಡೆ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಸಭೆಯಲ್ಲಿ ಮಾಜಿ ಮೇಯರ್ ಜಿ.ಎಲ್.ಭೈರಪ್ಪ, ಪರಿಸರ ಬಳಗದ ಪರಶು,ರಾಮೇಗೌಡ, ಪ್ರೊ.ಕಾಳೇಗೌಡ ನಾಗವಾರ, ಭಾನು ಮೋಹನ್ ಸೇರಿದಂತೆ ಕ್ಲೀನ್ ಮೈಸೂರು, ಮೈಸೂರು ಗ್ರಾಹಕ ಪರಿಷತ್ ಸೇರಿದಂತೆ ಹಲವು ಸಂಘ- ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…