ಜಿಲ್ಲೆಗಳು

ಚಾಮುಂಡಿ ಬೆಟ್ಟದ ಉಳಿವಿಗೆ ಹೋರಾಟ ಅಗತ್ಯ

ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ ಸಂಸ್ಥೆ ಸಭಾಂಗಣದಲ್ಲಿ ಸಭೆ ಸೇರಿದ ಸಮಿತಿ ಸದಸ್ಯರು ಹಾಗೂ ಹಲವು ಸಂಘಟನೆಗಳ ಮುಖಂಡರು, ಚಾಮುಂಡಿಬೆಟ್ಟದ ಮೇಲೆ ನಡೆಯುತ್ತಿರುವ ಕಾಮಗಾರಿಗಳು ಇದೇ ರೀತಿ ಮುಂದುವರೆದರೆ ಬೆಟ್ಟದ ಪಾವಿತ್ರತೆ ಹಾಳಾಗುವುದರ ಜೊತೆಗೆ ಸಾಕಷ್ಟು ಹಾನಿಯುಂಟಾಗಲಿದೆ. ಹಾಗಾಗಿ,ಚಾಮುಂಡಿಬೆಟ್ಟವನ್ನು ಇರುವಂತೆೆಯೇ ಉಳಿಸಿಕೊಳ್ಳಲು ಹೋರಾಟ ಅಗತ್ಯ ಎಂದರು.

ದೇವಿಕೆರೆಗೆ ಹೊಸರೂಪ ನೀಡುತ್ತೇವೆಂದು ಜೆಸಿಬಿಗಳಿಂದ ಹೂಳೆತ್ತಿಸುತ್ತಿದ್ದಾರೆ. ಇದರಿಂದ ಬೆಟ್ಟ ಇನ್ನಷ್ಟು ಸಡಿಲವಾಗುವ ಸಾಧ್ಯತೆ ಇದೆ. ಚಾಮುಂಡಿಬೆಟ್ಟದ ಉಳಿವಿಗಾಗಿ ಪೂರ್ವ ತ ಇನ್ನೆರಡು ದಿನಗಳಿಂದ ಹೋರಾಟ ಆರಂಭಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿದೆ ಎಂದರು. ಮೈಸೂರು ಗ್ರಾಹಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ ಮಾತನಾಡಿ, ಚಾಮುಂಡಿ ಬೆಟ್ಟ ಉಳಿಸಬೇಕಾದರೆ ನಿರಂತರ ಹೋರಾಟ ಅವಶ್ಯವಾಗಿದೆ ಎಂದರು.

ಪ್ರೊ.ಕೆ.ಕಾಳಚೆನ್ನೇಗೌಡ ಮಾತನಾಡಿ, ಪ್ರಸಾದ ಯೋಜನೆ ಹೆಸರಿನಲ್ಲಿ ಚಾಮುಂಡಿದ ಮೇಲೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳು ನಿಲ್ಲಬೇಕು. ಜನಪ್ರತಿನಿಧಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಅಧಿಕಾರಿಗಳಿಗೆ ಪರಿಸರ ಜ್ಞಾನ ಇರುವುದಿಲ್ಲ. ಆದ್ದರಿಂದ ಸಾಧ್ಯವಾದರೆ ಕಾನೂನು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಇತಿಹಾಸ ತಜ್ಞ ಪ್ರೊ.ರಂಗರಾಜು ಮಾತನಾಡಿ, ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆ ಉಳಿಯಬೇಕಾದರೆ ಮೈಸೂರು ಬಂದ್ ಮಾದರಿಯಲ್ಲಿ ಪ್ರತಿಭಟನೆ ನಡೆಸಬೇಕು. ಬೆಟ್ಟದ ಇತಿಹಾಸ ಅರಿಯದೆ ಎಲ್ಲೆಡೆ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ಮೇಯರ್ ಜಿ.ಎಲ್.ಭೈರಪ್ಪ, ಪರಿಸರ ಬಳಗದ ಪರಶು,ರಾಮೇಗೌಡ, ಪ್ರೊ.ಕಾಳೇಗೌಡ ನಾಗವಾರ, ಭಾನು ಮೋಹನ್ ಸೇರಿದಂತೆ ಕ್ಲೀನ್ ಮೈಸೂರು, ಮೈಸೂರು ಗ್ರಾಹಕ ಪರಿಷತ್ ಸೇರಿದಂತೆ ಹಲವು ಸಂಘ- ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು

 

andolanait

Recent Posts

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

12 mins ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

4 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

4 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

4 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

4 hours ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

4 hours ago