ಜಿಲ್ಲೆಗಳು

ಚಾಮುಂಡಿ ಬೆಟ್ಟದ ಉಳಿವಿಗೆ ಹೋರಾಟ ಅಗತ್ಯ

ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ ಸಂಸ್ಥೆ ಸಭಾಂಗಣದಲ್ಲಿ ಸಭೆ ಸೇರಿದ ಸಮಿತಿ ಸದಸ್ಯರು ಹಾಗೂ ಹಲವು ಸಂಘಟನೆಗಳ ಮುಖಂಡರು, ಚಾಮುಂಡಿಬೆಟ್ಟದ ಮೇಲೆ ನಡೆಯುತ್ತಿರುವ ಕಾಮಗಾರಿಗಳು ಇದೇ ರೀತಿ ಮುಂದುವರೆದರೆ ಬೆಟ್ಟದ ಪಾವಿತ್ರತೆ ಹಾಳಾಗುವುದರ ಜೊತೆಗೆ ಸಾಕಷ್ಟು ಹಾನಿಯುಂಟಾಗಲಿದೆ. ಹಾಗಾಗಿ,ಚಾಮುಂಡಿಬೆಟ್ಟವನ್ನು ಇರುವಂತೆೆಯೇ ಉಳಿಸಿಕೊಳ್ಳಲು ಹೋರಾಟ ಅಗತ್ಯ ಎಂದರು.

ದೇವಿಕೆರೆಗೆ ಹೊಸರೂಪ ನೀಡುತ್ತೇವೆಂದು ಜೆಸಿಬಿಗಳಿಂದ ಹೂಳೆತ್ತಿಸುತ್ತಿದ್ದಾರೆ. ಇದರಿಂದ ಬೆಟ್ಟ ಇನ್ನಷ್ಟು ಸಡಿಲವಾಗುವ ಸಾಧ್ಯತೆ ಇದೆ. ಚಾಮುಂಡಿಬೆಟ್ಟದ ಉಳಿವಿಗಾಗಿ ಪೂರ್ವ ತ ಇನ್ನೆರಡು ದಿನಗಳಿಂದ ಹೋರಾಟ ಆರಂಭಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿದೆ ಎಂದರು. ಮೈಸೂರು ಗ್ರಾಹಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ ಮಾತನಾಡಿ, ಚಾಮುಂಡಿ ಬೆಟ್ಟ ಉಳಿಸಬೇಕಾದರೆ ನಿರಂತರ ಹೋರಾಟ ಅವಶ್ಯವಾಗಿದೆ ಎಂದರು.

ಪ್ರೊ.ಕೆ.ಕಾಳಚೆನ್ನೇಗೌಡ ಮಾತನಾಡಿ, ಪ್ರಸಾದ ಯೋಜನೆ ಹೆಸರಿನಲ್ಲಿ ಚಾಮುಂಡಿದ ಮೇಲೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳು ನಿಲ್ಲಬೇಕು. ಜನಪ್ರತಿನಿಧಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಅಧಿಕಾರಿಗಳಿಗೆ ಪರಿಸರ ಜ್ಞಾನ ಇರುವುದಿಲ್ಲ. ಆದ್ದರಿಂದ ಸಾಧ್ಯವಾದರೆ ಕಾನೂನು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಇತಿಹಾಸ ತಜ್ಞ ಪ್ರೊ.ರಂಗರಾಜು ಮಾತನಾಡಿ, ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆ ಉಳಿಯಬೇಕಾದರೆ ಮೈಸೂರು ಬಂದ್ ಮಾದರಿಯಲ್ಲಿ ಪ್ರತಿಭಟನೆ ನಡೆಸಬೇಕು. ಬೆಟ್ಟದ ಇತಿಹಾಸ ಅರಿಯದೆ ಎಲ್ಲೆಡೆ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ಮೇಯರ್ ಜಿ.ಎಲ್.ಭೈರಪ್ಪ, ಪರಿಸರ ಬಳಗದ ಪರಶು,ರಾಮೇಗೌಡ, ಪ್ರೊ.ಕಾಳೇಗೌಡ ನಾಗವಾರ, ಭಾನು ಮೋಹನ್ ಸೇರಿದಂತೆ ಕ್ಲೀನ್ ಮೈಸೂರು, ಮೈಸೂರು ಗ್ರಾಹಕ ಪರಿಷತ್ ಸೇರಿದಂತೆ ಹಲವು ಸಂಘ- ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು

 

andolanait

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

3 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

3 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

3 hours ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

6 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

6 hours ago