ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ.
ನಗರದ ಜೆಎಲ್ಬಿ ರಸ್ತೆಯಲ್ಲಿರುವ ಇಂಜಿನಿಯರ್ ಸಂಸ್ಥೆ ಸಭಾಂಗಣದಲ್ಲಿ ಸಭೆ ಸೇರಿದ ಸಮಿತಿ ಸದಸ್ಯರು ಹಾಗೂ ಹಲವು ಸಂಘಟನೆಗಳ ಮುಖಂಡರು, ಚಾಮುಂಡಿಬೆಟ್ಟದ ಮೇಲೆ ನಡೆಯುತ್ತಿರುವ ಕಾಮಗಾರಿಗಳು ಇದೇ ರೀತಿ ಮುಂದುವರೆದರೆ ಬೆಟ್ಟದ ಪಾವಿತ್ರತೆ ಹಾಳಾಗುವುದರ ಜೊತೆಗೆ ಸಾಕಷ್ಟು ಹಾನಿಯುಂಟಾಗಲಿದೆ. ಹಾಗಾಗಿ,ಚಾಮುಂಡಿಬೆಟ್ಟವನ್ನು ಇರುವಂತೆೆಯೇ ಉಳಿಸಿಕೊಳ್ಳಲು ಹೋರಾಟ ಅಗತ್ಯ ಎಂದರು.
ದೇವಿಕೆರೆಗೆ ಹೊಸರೂಪ ನೀಡುತ್ತೇವೆಂದು ಜೆಸಿಬಿಗಳಿಂದ ಹೂಳೆತ್ತಿಸುತ್ತಿದ್ದಾರೆ. ಇದರಿಂದ ಬೆಟ್ಟ ಇನ್ನಷ್ಟು ಸಡಿಲವಾಗುವ ಸಾಧ್ಯತೆ ಇದೆ. ಚಾಮುಂಡಿಬೆಟ್ಟದ ಉಳಿವಿಗಾಗಿ ಪೂರ್ವ ತ ಇನ್ನೆರಡು ದಿನಗಳಿಂದ ಹೋರಾಟ ಆರಂಭಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿದೆ ಎಂದರು. ಮೈಸೂರು ಗ್ರಾಹಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ ಮಾತನಾಡಿ, ಚಾಮುಂಡಿ ಬೆಟ್ಟ ಉಳಿಸಬೇಕಾದರೆ ನಿರಂತರ ಹೋರಾಟ ಅವಶ್ಯವಾಗಿದೆ ಎಂದರು.
ಪ್ರೊ.ಕೆ.ಕಾಳಚೆನ್ನೇಗೌಡ ಮಾತನಾಡಿ, ಪ್ರಸಾದ ಯೋಜನೆ ಹೆಸರಿನಲ್ಲಿ ಚಾಮುಂಡಿದ ಮೇಲೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳು ನಿಲ್ಲಬೇಕು. ಜನಪ್ರತಿನಿಧಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಅಧಿಕಾರಿಗಳಿಗೆ ಪರಿಸರ ಜ್ಞಾನ ಇರುವುದಿಲ್ಲ. ಆದ್ದರಿಂದ ಸಾಧ್ಯವಾದರೆ ಕಾನೂನು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.
ಇತಿಹಾಸ ತಜ್ಞ ಪ್ರೊ.ರಂಗರಾಜು ಮಾತನಾಡಿ, ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆ ಉಳಿಯಬೇಕಾದರೆ ಮೈಸೂರು ಬಂದ್ ಮಾದರಿಯಲ್ಲಿ ಪ್ರತಿಭಟನೆ ನಡೆಸಬೇಕು. ಬೆಟ್ಟದ ಇತಿಹಾಸ ಅರಿಯದೆ ಎಲ್ಲೆಡೆ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಸಭೆಯಲ್ಲಿ ಮಾಜಿ ಮೇಯರ್ ಜಿ.ಎಲ್.ಭೈರಪ್ಪ, ಪರಿಸರ ಬಳಗದ ಪರಶು,ರಾಮೇಗೌಡ, ಪ್ರೊ.ಕಾಳೇಗೌಡ ನಾಗವಾರ, ಭಾನು ಮೋಹನ್ ಸೇರಿದಂತೆ ಕ್ಲೀನ್ ಮೈಸೂರು, ಮೈಸೂರು ಗ್ರಾಹಕ ಪರಿಷತ್ ಸೇರಿದಂತೆ ಹಲವು ಸಂಘ- ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…