ಜಿಲ್ಲೆಗಳು

ಚಾಮುಂಡಿ ಬೆಟ್ಟದ ಉಳಿವಿಗೆ ಹೋರಾಟ ಅಗತ್ಯ

ಮೈಸೂರು: ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದಲ್ಲಿ ಪ್ರಸಾದ ಯೋಜನೆ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತಡೆದು, ಬೆಟ್ಟದ ಪಾವಿತ್ರತೆಯನ್ನು ಉಳಿಸಲು ಸರಣಿ ಹೋರಾಟ ನಡೆಸಲು ಚಾಮುಂಡಿ ಬೆಟ್ಟ ಉಳಿಸಿ ಹೋರಾಟ ಸಮಿತಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ನಿರ್ಧಾರ ಕೈಗೊಂಡಿವೆ.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಇಂಜಿನಿಯರ್ ಸಂಸ್ಥೆ ಸಭಾಂಗಣದಲ್ಲಿ ಸಭೆ ಸೇರಿದ ಸಮಿತಿ ಸದಸ್ಯರು ಹಾಗೂ ಹಲವು ಸಂಘಟನೆಗಳ ಮುಖಂಡರು, ಚಾಮುಂಡಿಬೆಟ್ಟದ ಮೇಲೆ ನಡೆಯುತ್ತಿರುವ ಕಾಮಗಾರಿಗಳು ಇದೇ ರೀತಿ ಮುಂದುವರೆದರೆ ಬೆಟ್ಟದ ಪಾವಿತ್ರತೆ ಹಾಳಾಗುವುದರ ಜೊತೆಗೆ ಸಾಕಷ್ಟು ಹಾನಿಯುಂಟಾಗಲಿದೆ. ಹಾಗಾಗಿ,ಚಾಮುಂಡಿಬೆಟ್ಟವನ್ನು ಇರುವಂತೆೆಯೇ ಉಳಿಸಿಕೊಳ್ಳಲು ಹೋರಾಟ ಅಗತ್ಯ ಎಂದರು.

ದೇವಿಕೆರೆಗೆ ಹೊಸರೂಪ ನೀಡುತ್ತೇವೆಂದು ಜೆಸಿಬಿಗಳಿಂದ ಹೂಳೆತ್ತಿಸುತ್ತಿದ್ದಾರೆ. ಇದರಿಂದ ಬೆಟ್ಟ ಇನ್ನಷ್ಟು ಸಡಿಲವಾಗುವ ಸಾಧ್ಯತೆ ಇದೆ. ಚಾಮುಂಡಿಬೆಟ್ಟದ ಉಳಿವಿಗಾಗಿ ಪೂರ್ವ ತ ಇನ್ನೆರಡು ದಿನಗಳಿಂದ ಹೋರಾಟ ಆರಂಭಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿದೆ ಎಂದರು. ಮೈಸೂರು ಗ್ರಾಹಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಭಾಮಿ ಶೆಣೈ ಮಾತನಾಡಿ, ಚಾಮುಂಡಿ ಬೆಟ್ಟ ಉಳಿಸಬೇಕಾದರೆ ನಿರಂತರ ಹೋರಾಟ ಅವಶ್ಯವಾಗಿದೆ ಎಂದರು.

ಪ್ರೊ.ಕೆ.ಕಾಳಚೆನ್ನೇಗೌಡ ಮಾತನಾಡಿ, ಪ್ರಸಾದ ಯೋಜನೆ ಹೆಸರಿನಲ್ಲಿ ಚಾಮುಂಡಿದ ಮೇಲೆ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳು ನಿಲ್ಲಬೇಕು. ಜನಪ್ರತಿನಿಧಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಅಧಿಕಾರಿಗಳಿಗೆ ಪರಿಸರ ಜ್ಞಾನ ಇರುವುದಿಲ್ಲ. ಆದ್ದರಿಂದ ಸಾಧ್ಯವಾದರೆ ಕಾನೂನು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಇತಿಹಾಸ ತಜ್ಞ ಪ್ರೊ.ರಂಗರಾಜು ಮಾತನಾಡಿ, ಧಾರ್ಮಿಕ ಕ್ಷೇತ್ರವಾದ ಚಾಮುಂಡಿ ಬೆಟ್ಟದ ಪಾವಿತ್ರ್ಯತೆ ಉಳಿಯಬೇಕಾದರೆ ಮೈಸೂರು ಬಂದ್ ಮಾದರಿಯಲ್ಲಿ ಪ್ರತಿಭಟನೆ ನಡೆಸಬೇಕು. ಬೆಟ್ಟದ ಇತಿಹಾಸ ಅರಿಯದೆ ಎಲ್ಲೆಡೆ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ಮೇಯರ್ ಜಿ.ಎಲ್.ಭೈರಪ್ಪ, ಪರಿಸರ ಬಳಗದ ಪರಶು,ರಾಮೇಗೌಡ, ಪ್ರೊ.ಕಾಳೇಗೌಡ ನಾಗವಾರ, ಭಾನು ಮೋಹನ್ ಸೇರಿದಂತೆ ಕ್ಲೀನ್ ಮೈಸೂರು, ಮೈಸೂರು ಗ್ರಾಹಕ ಪರಿಷತ್ ಸೇರಿದಂತೆ ಹಲವು ಸಂಘ- ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು

 

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago