ಜಿಲ್ಲೆಗಳು

ಎಚ್‌ಸಿಎಂ ಪುತ್ರನ ಮನೆಯಲ್ಲಿ ನಾಯಿ ಮರಿಗಳ ಕಳ್ಳತನ

ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ.

ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು ಎರಡು ಮರಿಗಳು ಕಾಣೆಯಾಗಿದ್ದು, ಯಾರೋ ಕಳ್ಳತನ ಮಾಡಿರಬಹುದೆಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ನಾಯಿಗಳಿಗೆ ಆಹಾರ ನೀಡಿ ಕಟ್ಟಿಹಾಕಲಾಗಿತ್ತು. ಮುಂಜಾನೆ ಎದ್ದು ನಾಯಿಯನ್ನು ವಾಕಿಂಗ್ ಮಾಡಿಸಲು ನೋಡಿದಾಗ ಕಾಣಿಸಲಿಲ್ಲ. ನಂತರ, ಅಕ್ಕಪಕ್ಕದ ಮನೆಗಳು,ಬೀದಿ, ಬಡಾವಣೆಯ ಪಾರ್ಕ್‌ನಲ್ಲಿ ಹುಡುಕಾಡಿದರೂ ಸಿಕಿಲ್ಲ. ಹೀಗಾಗಿ,ನಾಯಿಗಳನ್ನು ಕಳ್ಳತನಮಾಡಿರಬಹುದೆಂದು ಶಂಕಿಸಲಾಗಿದೆ.

ಬಿಳಿ ಬಣ್ಣದಲ್ಲಿರುವ ತಾಯಿ ನಾಯಿ, ಕಪ್ಪು ಬಣ್ಣದ ಒಂದು ಹೆಣ್ಣು,ಒಂದು ಗಂಡು ಕಾಣೆಯಾಗಿರುವ ಕಾರಣ ಸಿಕ್ಕಿದಲ್ಲಿ ದೂರವಾಣಿ ಸಂಖ್ಯೆ 9972948453  ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಕೋರಲಾಗಿದೆ.

andolana

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

11 mins ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

46 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

57 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

1 hour ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

2 hours ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

3 hours ago