ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ.
ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು ಎರಡು ಮರಿಗಳು ಕಾಣೆಯಾಗಿದ್ದು, ಯಾರೋ ಕಳ್ಳತನ ಮಾಡಿರಬಹುದೆಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ನಾಯಿಗಳಿಗೆ ಆಹಾರ ನೀಡಿ ಕಟ್ಟಿಹಾಕಲಾಗಿತ್ತು. ಮುಂಜಾನೆ ಎದ್ದು ನಾಯಿಯನ್ನು ವಾಕಿಂಗ್ ಮಾಡಿಸಲು ನೋಡಿದಾಗ ಕಾಣಿಸಲಿಲ್ಲ. ನಂತರ, ಅಕ್ಕಪಕ್ಕದ ಮನೆಗಳು,ಬೀದಿ, ಬಡಾವಣೆಯ ಪಾರ್ಕ್ನಲ್ಲಿ ಹುಡುಕಾಡಿದರೂ ಸಿಕಿಲ್ಲ. ಹೀಗಾಗಿ,ನಾಯಿಗಳನ್ನು ಕಳ್ಳತನಮಾಡಿರಬಹುದೆಂದು ಶಂಕಿಸಲಾಗಿದೆ.
ಬಿಳಿ ಬಣ್ಣದಲ್ಲಿರುವ ತಾಯಿ ನಾಯಿ, ಕಪ್ಪು ಬಣ್ಣದ ಒಂದು ಹೆಣ್ಣು,ಒಂದು ಗಂಡು ಕಾಣೆಯಾಗಿರುವ ಕಾರಣ ಸಿಕ್ಕಿದಲ್ಲಿ ದೂರವಾಣಿ ಸಂಖ್ಯೆ 9972948453 ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಕೋರಲಾಗಿದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…