ಜಿಲ್ಲೆಗಳು

ಎಚ್‌ಸಿಎಂ ಪುತ್ರನ ಮನೆಯಲ್ಲಿ ನಾಯಿ ಮರಿಗಳ ಕಳ್ಳತನ

ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ.

ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು ಎರಡು ಮರಿಗಳು ಕಾಣೆಯಾಗಿದ್ದು, ಯಾರೋ ಕಳ್ಳತನ ಮಾಡಿರಬಹುದೆಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ನಾಯಿಗಳಿಗೆ ಆಹಾರ ನೀಡಿ ಕಟ್ಟಿಹಾಕಲಾಗಿತ್ತು. ಮುಂಜಾನೆ ಎದ್ದು ನಾಯಿಯನ್ನು ವಾಕಿಂಗ್ ಮಾಡಿಸಲು ನೋಡಿದಾಗ ಕಾಣಿಸಲಿಲ್ಲ. ನಂತರ, ಅಕ್ಕಪಕ್ಕದ ಮನೆಗಳು,ಬೀದಿ, ಬಡಾವಣೆಯ ಪಾರ್ಕ್‌ನಲ್ಲಿ ಹುಡುಕಾಡಿದರೂ ಸಿಕಿಲ್ಲ. ಹೀಗಾಗಿ,ನಾಯಿಗಳನ್ನು ಕಳ್ಳತನಮಾಡಿರಬಹುದೆಂದು ಶಂಕಿಸಲಾಗಿದೆ.

ಬಿಳಿ ಬಣ್ಣದಲ್ಲಿರುವ ತಾಯಿ ನಾಯಿ, ಕಪ್ಪು ಬಣ್ಣದ ಒಂದು ಹೆಣ್ಣು,ಒಂದು ಗಂಡು ಕಾಣೆಯಾಗಿರುವ ಕಾರಣ ಸಿಕ್ಕಿದಲ್ಲಿ ದೂರವಾಣಿ ಸಂಖ್ಯೆ 9972948453  ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಕೋರಲಾಗಿದೆ.

andolana

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

56 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago