ಜಿಲ್ಲೆಗಳು

ಎಚ್‌ಸಿಎಂ ಪುತ್ರನ ಮನೆಯಲ್ಲಿ ನಾಯಿ ಮರಿಗಳ ಕಳ್ಳತನ

ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ.

ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು ಎರಡು ಮರಿಗಳು ಕಾಣೆಯಾಗಿದ್ದು, ಯಾರೋ ಕಳ್ಳತನ ಮಾಡಿರಬಹುದೆಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ನಾಯಿಗಳಿಗೆ ಆಹಾರ ನೀಡಿ ಕಟ್ಟಿಹಾಕಲಾಗಿತ್ತು. ಮುಂಜಾನೆ ಎದ್ದು ನಾಯಿಯನ್ನು ವಾಕಿಂಗ್ ಮಾಡಿಸಲು ನೋಡಿದಾಗ ಕಾಣಿಸಲಿಲ್ಲ. ನಂತರ, ಅಕ್ಕಪಕ್ಕದ ಮನೆಗಳು,ಬೀದಿ, ಬಡಾವಣೆಯ ಪಾರ್ಕ್‌ನಲ್ಲಿ ಹುಡುಕಾಡಿದರೂ ಸಿಕಿಲ್ಲ. ಹೀಗಾಗಿ,ನಾಯಿಗಳನ್ನು ಕಳ್ಳತನಮಾಡಿರಬಹುದೆಂದು ಶಂಕಿಸಲಾಗಿದೆ.

ಬಿಳಿ ಬಣ್ಣದಲ್ಲಿರುವ ತಾಯಿ ನಾಯಿ, ಕಪ್ಪು ಬಣ್ಣದ ಒಂದು ಹೆಣ್ಣು,ಒಂದು ಗಂಡು ಕಾಣೆಯಾಗಿರುವ ಕಾರಣ ಸಿಕ್ಕಿದಲ್ಲಿ ದೂರವಾಣಿ ಸಂಖ್ಯೆ 9972948453  ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಕೋರಲಾಗಿದೆ.

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

7 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

8 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

8 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

8 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

9 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

17 hours ago