ಜಿಲ್ಲೆಗಳು

ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!

ಬೆಂಗಳೂರು: “ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ “ಜೈ ಶ್ರೀರಾಮ್” ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ” ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.
ಜನಪ್ರಿಯ ಲೇಖಕ  ಮೈಸೂರಿನ ಎಸ್ ಉಮೇಶ್ ರಚಿಸಿರುವ “ಅಯೋಧ್ಯಾ” ಕೃತಿಯ ಮೊದಲ ಪ್ರತಿಯನ್ನು ಹಿರಿಯ ಪತ್ರಕರ್ತ ರವೀಂದ್ರ ಜೋಶಿ ಅವರಿಂದ ಸ್ವೀಕರಿಸಿ ಮಾತನಾಡಿ ಅವರು,”ಅಯೋಧ್ಯ ಎನ್ನುವ ಪದವೇ ಸೋಲು ಇರಲಾರದು ಎಂದು ಅರ್ಥ ಎಂದರು.
ಹೀಗಾಗಿ ಆಕ್ರಮಣ ನಡೆದರೂ ಕೂಡ ಅಯೋಧ್ಯೆ ಪದೇಪದೇ ಪುನರುಜ್ಜಿವನಗೊಂಡಿದೆ. ಇದೀಗ ವೈಭವದ ರಾಮ ರಾಜ್ಯ ನಿರ್ಮಾಣವಾಗಿದೆ. ರಾಮ ಎನ್ನುವ ಪದ ಈ ದೇಶದ ಅಸ್ಮಿತೆ, ಸ್ವಾಭಿಮಾನದ ಪ್ರತೀಕ ಎಂದರು.
ರಾಮನಾಮ ಇಲ್ಲಿಯ ಜನರ ಉಸಿರು. ಹೀಗಾಗಿ ಎಷ್ಟೇ ದೌರ್ಜನ್ಯ ನಡೆದರೂ ಈ ದೇಶದ ನೆಲದ ಸಂಸ್ಕೃತಿಯಿಂದ ರಾಮ ನಾಮವನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಲೇಖಕ ಉಮೇಶ್ ಮಾತನಾಡಿ “ಕಳೆದ ಎರಡು ವರ್ಷಗಳ ನಿರಂತರ ಅಧ್ಯಯನದ ಫಲಶ್ರುತಿ ನನ್ನ ಈ ಕೃತಿ. ಈ ಪುಸ್ತಕ ರಚನೆಯಲ್ಲಿ ನನಗೆ ಹಲವರ ಸಹಾಯ ದೊರೆತಿದೆ.
ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥರ ಆಶೀರ್ವಾದದಿಂದ ಪ್ರಾರಂಭಗೊಂಡ ಈ ಸಾರಸ್ವತ ಯಜ್ಞ ಹಲವರ ಸಹಾಯದಿಂದಾಗಿ ಸಾಕಾರಗೊಂಡಿರುವಂಥದ್ದು.
ರಾಮ ಜನ್ಮ ಭೂಮಿ ಟ್ರಸ್ಟ್ ನ ಗೋಪಾಲ್ ಜಿ, ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಚಂಪತ್ ರಾಯ್, ಉಚ್ಚ ನ್ಯಾಯಾಲಯದ ವಕೀಲ ಮೋಹನ್ ಪರಾಶರನ್ ಅವರ ಯೋಗದಾನ ಈ ಕೃತಿಯಲ್ಲಿದೆ.
ರಾಮ ಜನ್ಮ ಭೂಮಿಯ ಹೋರಾಟದ ಸಂಪೂರ್ಣ ಕಥನವನ್ನು ಇಲ್ಲಿ ಎಳೆ ಎಳೆಯಾಗಿ ಬಿಡಿಸಿಡಲಾಗಿದೆ ಕನ್ನಡದ ಜನತೆಗೆ ಅಯೋಧ್ಯೆಯ ಹೋರಾಟ ತಲುಪಲಿ ಎಂಬ ಸದಾಶಿವದೊಂದಿಗೆ ಬರೆದಂತಹ ಕೃತಿ ಇದು.
ಓದುಗರು ಇದನ್ನ ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು” ಎಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಧಾತ್ರಿ ಪ್ರಕಾಶನದ ಪ್ರಕಾಶಕಿ ಬೃಂದಾ ಉಮೇಶ್ “ಈ ಕೃತಿ ಕರ್ನಾಟಕದ ಎಲ್ಲ ಪುಸ್ತಕ ಮಳಿಗೆಗಳಲ್ಲೂ ಲಭ್ಯವಿದೆ” ಎಂದು ತಿಳಿಸಿದರು.
andolanait

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

8 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

9 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

9 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

9 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

9 hours ago