ಜಿಲ್ಲೆಗಳು

ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!

ಬೆಂಗಳೂರು: “ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ “ಜೈ ಶ್ರೀರಾಮ್” ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ” ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.
ಜನಪ್ರಿಯ ಲೇಖಕ  ಮೈಸೂರಿನ ಎಸ್ ಉಮೇಶ್ ರಚಿಸಿರುವ “ಅಯೋಧ್ಯಾ” ಕೃತಿಯ ಮೊದಲ ಪ್ರತಿಯನ್ನು ಹಿರಿಯ ಪತ್ರಕರ್ತ ರವೀಂದ್ರ ಜೋಶಿ ಅವರಿಂದ ಸ್ವೀಕರಿಸಿ ಮಾತನಾಡಿ ಅವರು,”ಅಯೋಧ್ಯ ಎನ್ನುವ ಪದವೇ ಸೋಲು ಇರಲಾರದು ಎಂದು ಅರ್ಥ ಎಂದರು.
ಹೀಗಾಗಿ ಆಕ್ರಮಣ ನಡೆದರೂ ಕೂಡ ಅಯೋಧ್ಯೆ ಪದೇಪದೇ ಪುನರುಜ್ಜಿವನಗೊಂಡಿದೆ. ಇದೀಗ ವೈಭವದ ರಾಮ ರಾಜ್ಯ ನಿರ್ಮಾಣವಾಗಿದೆ. ರಾಮ ಎನ್ನುವ ಪದ ಈ ದೇಶದ ಅಸ್ಮಿತೆ, ಸ್ವಾಭಿಮಾನದ ಪ್ರತೀಕ ಎಂದರು.
ರಾಮನಾಮ ಇಲ್ಲಿಯ ಜನರ ಉಸಿರು. ಹೀಗಾಗಿ ಎಷ್ಟೇ ದೌರ್ಜನ್ಯ ನಡೆದರೂ ಈ ದೇಶದ ನೆಲದ ಸಂಸ್ಕೃತಿಯಿಂದ ರಾಮ ನಾಮವನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಲೇಖಕ ಉಮೇಶ್ ಮಾತನಾಡಿ “ಕಳೆದ ಎರಡು ವರ್ಷಗಳ ನಿರಂತರ ಅಧ್ಯಯನದ ಫಲಶ್ರುತಿ ನನ್ನ ಈ ಕೃತಿ. ಈ ಪುಸ್ತಕ ರಚನೆಯಲ್ಲಿ ನನಗೆ ಹಲವರ ಸಹಾಯ ದೊರೆತಿದೆ.
ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥರ ಆಶೀರ್ವಾದದಿಂದ ಪ್ರಾರಂಭಗೊಂಡ ಈ ಸಾರಸ್ವತ ಯಜ್ಞ ಹಲವರ ಸಹಾಯದಿಂದಾಗಿ ಸಾಕಾರಗೊಂಡಿರುವಂಥದ್ದು.
ರಾಮ ಜನ್ಮ ಭೂಮಿ ಟ್ರಸ್ಟ್ ನ ಗೋಪಾಲ್ ಜಿ, ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಚಂಪತ್ ರಾಯ್, ಉಚ್ಚ ನ್ಯಾಯಾಲಯದ ವಕೀಲ ಮೋಹನ್ ಪರಾಶರನ್ ಅವರ ಯೋಗದಾನ ಈ ಕೃತಿಯಲ್ಲಿದೆ.
ರಾಮ ಜನ್ಮ ಭೂಮಿಯ ಹೋರಾಟದ ಸಂಪೂರ್ಣ ಕಥನವನ್ನು ಇಲ್ಲಿ ಎಳೆ ಎಳೆಯಾಗಿ ಬಿಡಿಸಿಡಲಾಗಿದೆ ಕನ್ನಡದ ಜನತೆಗೆ ಅಯೋಧ್ಯೆಯ ಹೋರಾಟ ತಲುಪಲಿ ಎಂಬ ಸದಾಶಿವದೊಂದಿಗೆ ಬರೆದಂತಹ ಕೃತಿ ಇದು.
ಓದುಗರು ಇದನ್ನ ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು” ಎಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಧಾತ್ರಿ ಪ್ರಕಾಶನದ ಪ್ರಕಾಶಕಿ ಬೃಂದಾ ಉಮೇಶ್ “ಈ ಕೃತಿ ಕರ್ನಾಟಕದ ಎಲ್ಲ ಪುಸ್ತಕ ಮಳಿಗೆಗಳಲ್ಲೂ ಲಭ್ಯವಿದೆ” ಎಂದು ತಿಳಿಸಿದರು.
andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

2 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

2 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

3 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

4 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

4 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

4 hours ago