ಜಿಲ್ಲೆಗಳು

ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!

ಬೆಂಗಳೂರು: “ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ “ಜೈ ಶ್ರೀರಾಮ್” ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ” ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.
ಜನಪ್ರಿಯ ಲೇಖಕ  ಮೈಸೂರಿನ ಎಸ್ ಉಮೇಶ್ ರಚಿಸಿರುವ “ಅಯೋಧ್ಯಾ” ಕೃತಿಯ ಮೊದಲ ಪ್ರತಿಯನ್ನು ಹಿರಿಯ ಪತ್ರಕರ್ತ ರವೀಂದ್ರ ಜೋಶಿ ಅವರಿಂದ ಸ್ವೀಕರಿಸಿ ಮಾತನಾಡಿ ಅವರು,”ಅಯೋಧ್ಯ ಎನ್ನುವ ಪದವೇ ಸೋಲು ಇರಲಾರದು ಎಂದು ಅರ್ಥ ಎಂದರು.
ಹೀಗಾಗಿ ಆಕ್ರಮಣ ನಡೆದರೂ ಕೂಡ ಅಯೋಧ್ಯೆ ಪದೇಪದೇ ಪುನರುಜ್ಜಿವನಗೊಂಡಿದೆ. ಇದೀಗ ವೈಭವದ ರಾಮ ರಾಜ್ಯ ನಿರ್ಮಾಣವಾಗಿದೆ. ರಾಮ ಎನ್ನುವ ಪದ ಈ ದೇಶದ ಅಸ್ಮಿತೆ, ಸ್ವಾಭಿಮಾನದ ಪ್ರತೀಕ ಎಂದರು.
ರಾಮನಾಮ ಇಲ್ಲಿಯ ಜನರ ಉಸಿರು. ಹೀಗಾಗಿ ಎಷ್ಟೇ ದೌರ್ಜನ್ಯ ನಡೆದರೂ ಈ ದೇಶದ ನೆಲದ ಸಂಸ್ಕೃತಿಯಿಂದ ರಾಮ ನಾಮವನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಲೇಖಕ ಉಮೇಶ್ ಮಾತನಾಡಿ “ಕಳೆದ ಎರಡು ವರ್ಷಗಳ ನಿರಂತರ ಅಧ್ಯಯನದ ಫಲಶ್ರುತಿ ನನ್ನ ಈ ಕೃತಿ. ಈ ಪುಸ್ತಕ ರಚನೆಯಲ್ಲಿ ನನಗೆ ಹಲವರ ಸಹಾಯ ದೊರೆತಿದೆ.
ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥರ ಆಶೀರ್ವಾದದಿಂದ ಪ್ರಾರಂಭಗೊಂಡ ಈ ಸಾರಸ್ವತ ಯಜ್ಞ ಹಲವರ ಸಹಾಯದಿಂದಾಗಿ ಸಾಕಾರಗೊಂಡಿರುವಂಥದ್ದು.
ರಾಮ ಜನ್ಮ ಭೂಮಿ ಟ್ರಸ್ಟ್ ನ ಗೋಪಾಲ್ ಜಿ, ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಚಂಪತ್ ರಾಯ್, ಉಚ್ಚ ನ್ಯಾಯಾಲಯದ ವಕೀಲ ಮೋಹನ್ ಪರಾಶರನ್ ಅವರ ಯೋಗದಾನ ಈ ಕೃತಿಯಲ್ಲಿದೆ.
ರಾಮ ಜನ್ಮ ಭೂಮಿಯ ಹೋರಾಟದ ಸಂಪೂರ್ಣ ಕಥನವನ್ನು ಇಲ್ಲಿ ಎಳೆ ಎಳೆಯಾಗಿ ಬಿಡಿಸಿಡಲಾಗಿದೆ ಕನ್ನಡದ ಜನತೆಗೆ ಅಯೋಧ್ಯೆಯ ಹೋರಾಟ ತಲುಪಲಿ ಎಂಬ ಸದಾಶಿವದೊಂದಿಗೆ ಬರೆದಂತಹ ಕೃತಿ ಇದು.
ಓದುಗರು ಇದನ್ನ ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು” ಎಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಧಾತ್ರಿ ಪ್ರಕಾಶನದ ಪ್ರಕಾಶಕಿ ಬೃಂದಾ ಉಮೇಶ್ “ಈ ಕೃತಿ ಕರ್ನಾಟಕದ ಎಲ್ಲ ಪುಸ್ತಕ ಮಳಿಗೆಗಳಲ್ಲೂ ಲಭ್ಯವಿದೆ” ಎಂದು ತಿಳಿಸಿದರು.
andolanait

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

1 hour ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

1 hour ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

1 hour ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

1 hour ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

1 hour ago