ಜಿಲ್ಲೆಗಳು

ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!

ಬೆಂಗಳೂರು: “ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ “ಜೈ ಶ್ರೀರಾಮ್” ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ” ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.
ಜನಪ್ರಿಯ ಲೇಖಕ  ಮೈಸೂರಿನ ಎಸ್ ಉಮೇಶ್ ರಚಿಸಿರುವ “ಅಯೋಧ್ಯಾ” ಕೃತಿಯ ಮೊದಲ ಪ್ರತಿಯನ್ನು ಹಿರಿಯ ಪತ್ರಕರ್ತ ರವೀಂದ್ರ ಜೋಶಿ ಅವರಿಂದ ಸ್ವೀಕರಿಸಿ ಮಾತನಾಡಿ ಅವರು,”ಅಯೋಧ್ಯ ಎನ್ನುವ ಪದವೇ ಸೋಲು ಇರಲಾರದು ಎಂದು ಅರ್ಥ ಎಂದರು.
ಹೀಗಾಗಿ ಆಕ್ರಮಣ ನಡೆದರೂ ಕೂಡ ಅಯೋಧ್ಯೆ ಪದೇಪದೇ ಪುನರುಜ್ಜಿವನಗೊಂಡಿದೆ. ಇದೀಗ ವೈಭವದ ರಾಮ ರಾಜ್ಯ ನಿರ್ಮಾಣವಾಗಿದೆ. ರಾಮ ಎನ್ನುವ ಪದ ಈ ದೇಶದ ಅಸ್ಮಿತೆ, ಸ್ವಾಭಿಮಾನದ ಪ್ರತೀಕ ಎಂದರು.
ರಾಮನಾಮ ಇಲ್ಲಿಯ ಜನರ ಉಸಿರು. ಹೀಗಾಗಿ ಎಷ್ಟೇ ದೌರ್ಜನ್ಯ ನಡೆದರೂ ಈ ದೇಶದ ನೆಲದ ಸಂಸ್ಕೃತಿಯಿಂದ ರಾಮ ನಾಮವನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಲೇಖಕ ಉಮೇಶ್ ಮಾತನಾಡಿ “ಕಳೆದ ಎರಡು ವರ್ಷಗಳ ನಿರಂತರ ಅಧ್ಯಯನದ ಫಲಶ್ರುತಿ ನನ್ನ ಈ ಕೃತಿ. ಈ ಪುಸ್ತಕ ರಚನೆಯಲ್ಲಿ ನನಗೆ ಹಲವರ ಸಹಾಯ ದೊರೆತಿದೆ.
ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥರ ಆಶೀರ್ವಾದದಿಂದ ಪ್ರಾರಂಭಗೊಂಡ ಈ ಸಾರಸ್ವತ ಯಜ್ಞ ಹಲವರ ಸಹಾಯದಿಂದಾಗಿ ಸಾಕಾರಗೊಂಡಿರುವಂಥದ್ದು.
ರಾಮ ಜನ್ಮ ಭೂಮಿ ಟ್ರಸ್ಟ್ ನ ಗೋಪಾಲ್ ಜಿ, ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಚಂಪತ್ ರಾಯ್, ಉಚ್ಚ ನ್ಯಾಯಾಲಯದ ವಕೀಲ ಮೋಹನ್ ಪರಾಶರನ್ ಅವರ ಯೋಗದಾನ ಈ ಕೃತಿಯಲ್ಲಿದೆ.
ರಾಮ ಜನ್ಮ ಭೂಮಿಯ ಹೋರಾಟದ ಸಂಪೂರ್ಣ ಕಥನವನ್ನು ಇಲ್ಲಿ ಎಳೆ ಎಳೆಯಾಗಿ ಬಿಡಿಸಿಡಲಾಗಿದೆ ಕನ್ನಡದ ಜನತೆಗೆ ಅಯೋಧ್ಯೆಯ ಹೋರಾಟ ತಲುಪಲಿ ಎಂಬ ಸದಾಶಿವದೊಂದಿಗೆ ಬರೆದಂತಹ ಕೃತಿ ಇದು.
ಓದುಗರು ಇದನ್ನ ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು” ಎಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಧಾತ್ರಿ ಪ್ರಕಾಶನದ ಪ್ರಕಾಶಕಿ ಬೃಂದಾ ಉಮೇಶ್ “ಈ ಕೃತಿ ಕರ್ನಾಟಕದ ಎಲ್ಲ ಪುಸ್ತಕ ಮಳಿಗೆಗಳಲ್ಲೂ ಲಭ್ಯವಿದೆ” ಎಂದು ತಿಳಿಸಿದರು.
andolanait

Recent Posts

ನಾಳೆ ಸಾರಿಗೆ ಮುಷ್ಕರ : ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…

17 mins ago

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

43 mins ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

1 hour ago

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…

2 hours ago

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

2 hours ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

4 hours ago