ಜಿಲ್ಲೆಗಳು

ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!

ಬೆಂಗಳೂರು: “ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ “ಜೈ ಶ್ರೀರಾಮ್” ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ” ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.
ಜನಪ್ರಿಯ ಲೇಖಕ  ಮೈಸೂರಿನ ಎಸ್ ಉಮೇಶ್ ರಚಿಸಿರುವ “ಅಯೋಧ್ಯಾ” ಕೃತಿಯ ಮೊದಲ ಪ್ರತಿಯನ್ನು ಹಿರಿಯ ಪತ್ರಕರ್ತ ರವೀಂದ್ರ ಜೋಶಿ ಅವರಿಂದ ಸ್ವೀಕರಿಸಿ ಮಾತನಾಡಿ ಅವರು,”ಅಯೋಧ್ಯ ಎನ್ನುವ ಪದವೇ ಸೋಲು ಇರಲಾರದು ಎಂದು ಅರ್ಥ ಎಂದರು.
ಹೀಗಾಗಿ ಆಕ್ರಮಣ ನಡೆದರೂ ಕೂಡ ಅಯೋಧ್ಯೆ ಪದೇಪದೇ ಪುನರುಜ್ಜಿವನಗೊಂಡಿದೆ. ಇದೀಗ ವೈಭವದ ರಾಮ ರಾಜ್ಯ ನಿರ್ಮಾಣವಾಗಿದೆ. ರಾಮ ಎನ್ನುವ ಪದ ಈ ದೇಶದ ಅಸ್ಮಿತೆ, ಸ್ವಾಭಿಮಾನದ ಪ್ರತೀಕ ಎಂದರು.
ರಾಮನಾಮ ಇಲ್ಲಿಯ ಜನರ ಉಸಿರು. ಹೀಗಾಗಿ ಎಷ್ಟೇ ದೌರ್ಜನ್ಯ ನಡೆದರೂ ಈ ದೇಶದ ನೆಲದ ಸಂಸ್ಕೃತಿಯಿಂದ ರಾಮ ನಾಮವನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಲೇಖಕ ಉಮೇಶ್ ಮಾತನಾಡಿ “ಕಳೆದ ಎರಡು ವರ್ಷಗಳ ನಿರಂತರ ಅಧ್ಯಯನದ ಫಲಶ್ರುತಿ ನನ್ನ ಈ ಕೃತಿ. ಈ ಪುಸ್ತಕ ರಚನೆಯಲ್ಲಿ ನನಗೆ ಹಲವರ ಸಹಾಯ ದೊರೆತಿದೆ.
ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥರ ಆಶೀರ್ವಾದದಿಂದ ಪ್ರಾರಂಭಗೊಂಡ ಈ ಸಾರಸ್ವತ ಯಜ್ಞ ಹಲವರ ಸಹಾಯದಿಂದಾಗಿ ಸಾಕಾರಗೊಂಡಿರುವಂಥದ್ದು.
ರಾಮ ಜನ್ಮ ಭೂಮಿ ಟ್ರಸ್ಟ್ ನ ಗೋಪಾಲ್ ಜಿ, ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಚಂಪತ್ ರಾಯ್, ಉಚ್ಚ ನ್ಯಾಯಾಲಯದ ವಕೀಲ ಮೋಹನ್ ಪರಾಶರನ್ ಅವರ ಯೋಗದಾನ ಈ ಕೃತಿಯಲ್ಲಿದೆ.
ರಾಮ ಜನ್ಮ ಭೂಮಿಯ ಹೋರಾಟದ ಸಂಪೂರ್ಣ ಕಥನವನ್ನು ಇಲ್ಲಿ ಎಳೆ ಎಳೆಯಾಗಿ ಬಿಡಿಸಿಡಲಾಗಿದೆ ಕನ್ನಡದ ಜನತೆಗೆ ಅಯೋಧ್ಯೆಯ ಹೋರಾಟ ತಲುಪಲಿ ಎಂಬ ಸದಾಶಿವದೊಂದಿಗೆ ಬರೆದಂತಹ ಕೃತಿ ಇದು.
ಓದುಗರು ಇದನ್ನ ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು” ಎಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಧಾತ್ರಿ ಪ್ರಕಾಶನದ ಪ್ರಕಾಶಕಿ ಬೃಂದಾ ಉಮೇಶ್ “ಈ ಕೃತಿ ಕರ್ನಾಟಕದ ಎಲ್ಲ ಪುಸ್ತಕ ಮಳಿಗೆಗಳಲ್ಲೂ ಲಭ್ಯವಿದೆ” ಎಂದು ತಿಳಿಸಿದರು.
andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

6 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

19 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

21 hours ago