ಜಿಲ್ಲೆಗಳು

ಅಯೋಧ್ಯಾ ಎಂಬ ಪದವೇ ಸೋಲಿಲ್ಲದ್ದು ಎಂಬ ಅರ್ಥ: ಅನಂತ್‌ಕುಮಾರ್‌ ಹೆಗಡೆ!

ಬೆಂಗಳೂರು: “ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ “ಜೈ ಶ್ರೀರಾಮ್” ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ” ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.
ಜನಪ್ರಿಯ ಲೇಖಕ  ಮೈಸೂರಿನ ಎಸ್ ಉಮೇಶ್ ರಚಿಸಿರುವ “ಅಯೋಧ್ಯಾ” ಕೃತಿಯ ಮೊದಲ ಪ್ರತಿಯನ್ನು ಹಿರಿಯ ಪತ್ರಕರ್ತ ರವೀಂದ್ರ ಜೋಶಿ ಅವರಿಂದ ಸ್ವೀಕರಿಸಿ ಮಾತನಾಡಿ ಅವರು,”ಅಯೋಧ್ಯ ಎನ್ನುವ ಪದವೇ ಸೋಲು ಇರಲಾರದು ಎಂದು ಅರ್ಥ ಎಂದರು.
ಹೀಗಾಗಿ ಆಕ್ರಮಣ ನಡೆದರೂ ಕೂಡ ಅಯೋಧ್ಯೆ ಪದೇಪದೇ ಪುನರುಜ್ಜಿವನಗೊಂಡಿದೆ. ಇದೀಗ ವೈಭವದ ರಾಮ ರಾಜ್ಯ ನಿರ್ಮಾಣವಾಗಿದೆ. ರಾಮ ಎನ್ನುವ ಪದ ಈ ದೇಶದ ಅಸ್ಮಿತೆ, ಸ್ವಾಭಿಮಾನದ ಪ್ರತೀಕ ಎಂದರು.
ರಾಮನಾಮ ಇಲ್ಲಿಯ ಜನರ ಉಸಿರು. ಹೀಗಾಗಿ ಎಷ್ಟೇ ದೌರ್ಜನ್ಯ ನಡೆದರೂ ಈ ದೇಶದ ನೆಲದ ಸಂಸ್ಕೃತಿಯಿಂದ ರಾಮ ನಾಮವನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.
ಲೇಖಕ ಉಮೇಶ್ ಮಾತನಾಡಿ “ಕಳೆದ ಎರಡು ವರ್ಷಗಳ ನಿರಂತರ ಅಧ್ಯಯನದ ಫಲಶ್ರುತಿ ನನ್ನ ಈ ಕೃತಿ. ಈ ಪುಸ್ತಕ ರಚನೆಯಲ್ಲಿ ನನಗೆ ಹಲವರ ಸಹಾಯ ದೊರೆತಿದೆ.
ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥರ ಆಶೀರ್ವಾದದಿಂದ ಪ್ರಾರಂಭಗೊಂಡ ಈ ಸಾರಸ್ವತ ಯಜ್ಞ ಹಲವರ ಸಹಾಯದಿಂದಾಗಿ ಸಾಕಾರಗೊಂಡಿರುವಂಥದ್ದು.
ರಾಮ ಜನ್ಮ ಭೂಮಿ ಟ್ರಸ್ಟ್ ನ ಗೋಪಾಲ್ ಜಿ, ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಚಂಪತ್ ರಾಯ್, ಉಚ್ಚ ನ್ಯಾಯಾಲಯದ ವಕೀಲ ಮೋಹನ್ ಪರಾಶರನ್ ಅವರ ಯೋಗದಾನ ಈ ಕೃತಿಯಲ್ಲಿದೆ.
ರಾಮ ಜನ್ಮ ಭೂಮಿಯ ಹೋರಾಟದ ಸಂಪೂರ್ಣ ಕಥನವನ್ನು ಇಲ್ಲಿ ಎಳೆ ಎಳೆಯಾಗಿ ಬಿಡಿಸಿಡಲಾಗಿದೆ ಕನ್ನಡದ ಜನತೆಗೆ ಅಯೋಧ್ಯೆಯ ಹೋರಾಟ ತಲುಪಲಿ ಎಂಬ ಸದಾಶಿವದೊಂದಿಗೆ ಬರೆದಂತಹ ಕೃತಿ ಇದು.
ಓದುಗರು ಇದನ್ನ ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು” ಎಂದು ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಧಾತ್ರಿ ಪ್ರಕಾಶನದ ಪ್ರಕಾಶಕಿ ಬೃಂದಾ ಉಮೇಶ್ “ಈ ಕೃತಿ ಕರ್ನಾಟಕದ ಎಲ್ಲ ಪುಸ್ತಕ ಮಳಿಗೆಗಳಲ್ಲೂ ಲಭ್ಯವಿದೆ” ಎಂದು ತಿಳಿಸಿದರು.
andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

7 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago