ಹನೂರು: ನಿಶಾಂತ್ ಬಳಗದಿಂದಲೇ ಪ್ರವಾಸಕ್ಕೆ ಹೋಗುತ್ತಿರುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದೇವೆ. ಆದರೆ ನಮ್ಮನ್ನು ಪ್ರವಾಸಕ್ಕೆ ಎಂದು ಕರೆದುಕೊಂಡು ಹೋಗಿ ನಿಶಾಂತ್ ಬಣಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಹೇಳಿರುವ ಮದುವನಹಳ್ಳಿ ಮಹೇಂದ್ರ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಒಡೆಯರ್ ಪಾಳ್ಯ ಗ್ರಾಮದ ವೀರಶೈವ ಲಿಂಗಾಯಿತ ಮಹಾಸಭಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಹೇಳಿದರು.
ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು. ಕಳೆದ ಎರಡು ತಿಂಗಳಿಂದ ಸಮಾಜ ಸೇವಕ ನಿಶಾಂತ್ ಮಾರ್ಗದರ್ಶನದಲ್ಲಿ ಪವರ್ ಆಫ್ ಯೂತ್ ಎಂಬ ಸಂಘಟನೆ ರಚಿಸಿಕೊಂಡು ಸಮಾಜ ಸೇವೆಯಲ್ಲಿ ತೊಡೆಸಿಕೊಂಡಿದ್ದೇವೆ. ಈ ಸಂಘಟನೆಯಿಂದ ಎಲ್ಲಾ ಕಾರ್ಯಕರ್ತರಿಗೂ ಪ್ರವಾಸವನ್ನು ಕೈಗೊಳ್ಳಲಾಗಿತ್ತು. ಅದರಲ್ಲಿ ಮಹೇಂದ್ರ ಮತ್ತು ಆತನ ಸ್ನೇಹಿತರಲ್ಲರೂ ಬಂದಿದ್ದರು. ಆದರೆ ಯಾರದೋ ಒತ್ತಡಕ್ಕೆ ಮಣಿದು, ನಮಗೆ ಮಾಹಿತಿ ನೀಡದೆ ನಿಶಾಂತ್ ಬೆಂಬಲಿಗರು ನಮ್ಮನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಿಕೆ ನೀಡಿರುವುದು ಹಾಸ್ಯಸ್ಪದ ಎಂದು ತಿಳಿಸಿದರು.
ನಾವು ಈಗಲೂ ವೆಂಕಟೇಶ್ ಬೆಂಬಲಿಗರಾಗಿಯೇ ಇದ್ದೇವೆ ಎಂದು ಹೇಳುತ್ತಿರುವ ಮಧುವನಳ್ಳಿ ಯುವಕರು ಈಗಲೂ ನಮ್ಮ ಸಂಪರ್ಕದಲ್ಲಿದ್ದಾರೆ. ಅವರನ್ನು ವಿಚಾರಿಸಿದಾಗ ನಾವು ಈಗಲೂ ನಿಶಾಂತ್ ಬಣದಲ್ಲಿಯೇ ಇದ್ದೇವೆ, ಯಾರದೋ ಒತ್ತಾಯಕ್ಕೆ ಮಾಡಿದ್ದು ಈ ಹೇಳಿಕೆ ನೀಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಜನ ಧ್ವನಿ ಬಿ.ವೆಂಕಟೇಶ್ ಅವರು ಕ್ಷೇತ್ರಕ್ಕೆ ಬಂದ ಪ್ರಾರಂಭದಲ್ಲಿ ನಾವು ಅವರೊಂದಿಗೆ ಗುರುತಿಸಿಕೊಂಡಿದ್ದೆವು. ಅವರಿಂದ ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ನಾವು ಜನರಿಗೆ ಸಾಕಷ್ಟು ಭರವಸೆಯನ್ನು ನೀಡಿದ್ದೆವು. ಆದರೆ ಅವರು ನಮ್ಮ ಭಾವನೆಗಳಿಗೆ ಸ್ಪಂದಿಸದೆ ಇದ್ದಿದ್ದರಿಂದ ನಾವು ಬೇಸೆತ್ತು ನಿಶಾಂತ್ ಅವರನ್ನು ಬೆಂಬಲಿಸುತ್ತಿದ್ದೇವೆ. ನಿಶಾಂತ್ ಅವರು ನಮ್ಮ ಪ್ರತಿಯೊಂದು ಅಹವಾಲನ್ನು ಸ್ವೀಕರಿಸಿ ಜನರಿಗೆ ಅನುಕೂಲ ಕಲ್ಪಿಸುತ್ತ ಬಂದಿದ್ದಾರೆ.
ಮುಂದಿನ ದಿನಗಳಲ್ಲಿ ಜನ ಧ್ವನಿ ವೆಂಕಟೇಶ್ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಶೇಕಡ 70% ಕಾರ್ಯಕರ್ತರು ನಿಶಾಂತ್ ಅವರೊಂದಿಗೆ ಬರಲಿದ್ದಾರೆ ಎಂದು ತಿಳಿಸಿದರು. ವೆಂಕಟೇಶ್ ಬಣದಲ್ಲಿರುವ ಯುವಕರು ನಿಶಾಂತ್ ಜೊತೆಯಲ್ಲಿಯೇ ಇದ್ದರು
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…