ಜಿಲ್ಲೆಗಳು

ವೆಂಕಟೇಶ್ ಬಣದಲ್ಲಿರುವ ಯುವಕರು ನಿಶಾಂತ್ ಜೊತೆಯಲ್ಲಿಯೇ ಇದ್ದಾರೆ : ವೀರಶೈವ ಲಿಂಗಾಯತ ಮಹಾಸಭಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್

ಹನೂರು: ನಿಶಾಂತ್ ಬಳಗದಿಂದಲೇ ಪ್ರವಾಸಕ್ಕೆ ಹೋಗುತ್ತಿರುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದೇವೆ. ಆದರೆ ನಮ್ಮನ್ನು ಪ್ರವಾಸಕ್ಕೆ ಎಂದು ಕರೆದುಕೊಂಡು ಹೋಗಿ ನಿಶಾಂತ್ ಬಣಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಹೇಳಿರುವ ಮದುವನಹಳ್ಳಿ ಮಹೇಂದ್ರ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಒಡೆಯರ್ ಪಾಳ್ಯ ಗ್ರಾಮದ ವೀರಶೈವ ಲಿಂಗಾಯಿತ ಮಹಾಸಭಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಹೇಳಿದರು.

ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು. ಕಳೆದ ಎರಡು ತಿಂಗಳಿಂದ ಸಮಾಜ ಸೇವಕ ನಿಶಾಂತ್ ಮಾರ್ಗದರ್ಶನದಲ್ಲಿ ಪವರ್ ಆಫ್ ಯೂತ್ ಎಂಬ ಸಂಘಟನೆ ರಚಿಸಿಕೊಂಡು ಸಮಾಜ ಸೇವೆಯಲ್ಲಿ ತೊಡೆಸಿಕೊಂಡಿದ್ದೇವೆ. ಈ ಸಂಘಟನೆಯಿಂದ ಎಲ್ಲಾ ಕಾರ್ಯಕರ್ತರಿಗೂ ಪ್ರವಾಸವನ್ನು ಕೈಗೊಳ್ಳಲಾಗಿತ್ತು. ಅದರಲ್ಲಿ ಮಹೇಂದ್ರ ಮತ್ತು ಆತನ ಸ್ನೇಹಿತರಲ್ಲರೂ ಬಂದಿದ್ದರು. ಆದರೆ ಯಾರದೋ ಒತ್ತಡಕ್ಕೆ ಮಣಿದು, ನಮಗೆ ಮಾಹಿತಿ ನೀಡದೆ ನಿಶಾಂತ್ ಬೆಂಬಲಿಗರು ನಮ್ಮನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಿಕೆ ನೀಡಿರುವುದು ಹಾಸ್ಯಸ್ಪದ ಎಂದು ತಿಳಿಸಿದರು.

ನಾವು ಈಗಲೂ ವೆಂಕಟೇಶ್ ಬೆಂಬಲಿಗರಾಗಿಯೇ ಇದ್ದೇವೆ ಎಂದು ಹೇಳುತ್ತಿರುವ ಮಧುವನಳ್ಳಿ ಯುವಕರು ಈಗಲೂ ನಮ್ಮ ಸಂಪರ್ಕದಲ್ಲಿದ್ದಾರೆ. ಅವರನ್ನು ವಿಚಾರಿಸಿದಾಗ ನಾವು ಈಗಲೂ ನಿಶಾಂತ್ ಬಣದಲ್ಲಿಯೇ ಇದ್ದೇವೆ, ಯಾರದೋ ಒತ್ತಾಯಕ್ಕೆ ಮಾಡಿದ್ದು ಈ ಹೇಳಿಕೆ ನೀಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಜನ ಧ್ವನಿ ಬಿ.ವೆಂಕಟೇಶ್ ಅವರು ಕ್ಷೇತ್ರಕ್ಕೆ ಬಂದ ಪ್ರಾರಂಭದಲ್ಲಿ ನಾವು ಅವರೊಂದಿಗೆ ಗುರುತಿಸಿಕೊಂಡಿದ್ದೆವು. ಅವರಿಂದ ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ನಾವು ಜನರಿಗೆ ಸಾಕಷ್ಟು ಭರವಸೆಯನ್ನು ನೀಡಿದ್ದೆವು. ಆದರೆ ಅವರು ನಮ್ಮ ಭಾವನೆಗಳಿಗೆ ಸ್ಪಂದಿಸದೆ ಇದ್ದಿದ್ದರಿಂದ ನಾವು ಬೇಸೆತ್ತು ನಿಶಾಂತ್ ಅವರನ್ನು ಬೆಂಬಲಿಸುತ್ತಿದ್ದೇವೆ. ನಿಶಾಂತ್ ಅವರು ನಮ್ಮ ಪ್ರತಿಯೊಂದು ಅಹವಾಲನ್ನು ಸ್ವೀಕರಿಸಿ ಜನರಿಗೆ ಅನುಕೂಲ ಕಲ್ಪಿಸುತ್ತ ಬಂದಿದ್ದಾರೆ.
ಮುಂದಿನ ದಿನಗಳಲ್ಲಿ ಜನ ಧ್ವನಿ ವೆಂಕಟೇಶ್ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಶೇಕಡ 70% ಕಾರ್ಯಕರ್ತರು ನಿಶಾಂತ್ ಅವರೊಂದಿಗೆ ಬರಲಿದ್ದಾರೆ ಎಂದು ತಿಳಿಸಿದರು. ವೆಂಕಟೇಶ್ ಬಣದಲ್ಲಿರುವ ಯುವಕರು ನಿಶಾಂತ್ ಜೊತೆಯಲ್ಲಿಯೇ ಇದ್ದರು

andolana

Recent Posts

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

5 mins ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

29 mins ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

45 mins ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

1 hour ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

2 hours ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago