ಜಿಲ್ಲೆಗಳು

ವೆಂಕಟೇಶ್ ಬಣದಲ್ಲಿರುವ ಯುವಕರು ನಿಶಾಂತ್ ಜೊತೆಯಲ್ಲಿಯೇ ಇದ್ದಾರೆ : ವೀರಶೈವ ಲಿಂಗಾಯತ ಮಹಾಸಭಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್

ಹನೂರು: ನಿಶಾಂತ್ ಬಳಗದಿಂದಲೇ ಪ್ರವಾಸಕ್ಕೆ ಹೋಗುತ್ತಿರುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದೇವೆ. ಆದರೆ ನಮ್ಮನ್ನು ಪ್ರವಾಸಕ್ಕೆ ಎಂದು ಕರೆದುಕೊಂಡು ಹೋಗಿ ನಿಶಾಂತ್ ಬಣಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಹೇಳಿರುವ ಮದುವನಹಳ್ಳಿ ಮಹೇಂದ್ರ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಒಡೆಯರ್ ಪಾಳ್ಯ ಗ್ರಾಮದ ವೀರಶೈವ ಲಿಂಗಾಯಿತ ಮಹಾಸಭಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಹೇಳಿದರು.

ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು. ಕಳೆದ ಎರಡು ತಿಂಗಳಿಂದ ಸಮಾಜ ಸೇವಕ ನಿಶಾಂತ್ ಮಾರ್ಗದರ್ಶನದಲ್ಲಿ ಪವರ್ ಆಫ್ ಯೂತ್ ಎಂಬ ಸಂಘಟನೆ ರಚಿಸಿಕೊಂಡು ಸಮಾಜ ಸೇವೆಯಲ್ಲಿ ತೊಡೆಸಿಕೊಂಡಿದ್ದೇವೆ. ಈ ಸಂಘಟನೆಯಿಂದ ಎಲ್ಲಾ ಕಾರ್ಯಕರ್ತರಿಗೂ ಪ್ರವಾಸವನ್ನು ಕೈಗೊಳ್ಳಲಾಗಿತ್ತು. ಅದರಲ್ಲಿ ಮಹೇಂದ್ರ ಮತ್ತು ಆತನ ಸ್ನೇಹಿತರಲ್ಲರೂ ಬಂದಿದ್ದರು. ಆದರೆ ಯಾರದೋ ಒತ್ತಡಕ್ಕೆ ಮಣಿದು, ನಮಗೆ ಮಾಹಿತಿ ನೀಡದೆ ನಿಶಾಂತ್ ಬೆಂಬಲಿಗರು ನಮ್ಮನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಿಕೆ ನೀಡಿರುವುದು ಹಾಸ್ಯಸ್ಪದ ಎಂದು ತಿಳಿಸಿದರು.

ನಾವು ಈಗಲೂ ವೆಂಕಟೇಶ್ ಬೆಂಬಲಿಗರಾಗಿಯೇ ಇದ್ದೇವೆ ಎಂದು ಹೇಳುತ್ತಿರುವ ಮಧುವನಳ್ಳಿ ಯುವಕರು ಈಗಲೂ ನಮ್ಮ ಸಂಪರ್ಕದಲ್ಲಿದ್ದಾರೆ. ಅವರನ್ನು ವಿಚಾರಿಸಿದಾಗ ನಾವು ಈಗಲೂ ನಿಶಾಂತ್ ಬಣದಲ್ಲಿಯೇ ಇದ್ದೇವೆ, ಯಾರದೋ ಒತ್ತಾಯಕ್ಕೆ ಮಾಡಿದ್ದು ಈ ಹೇಳಿಕೆ ನೀಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಜನ ಧ್ವನಿ ಬಿ.ವೆಂಕಟೇಶ್ ಅವರು ಕ್ಷೇತ್ರಕ್ಕೆ ಬಂದ ಪ್ರಾರಂಭದಲ್ಲಿ ನಾವು ಅವರೊಂದಿಗೆ ಗುರುತಿಸಿಕೊಂಡಿದ್ದೆವು. ಅವರಿಂದ ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ನಾವು ಜನರಿಗೆ ಸಾಕಷ್ಟು ಭರವಸೆಯನ್ನು ನೀಡಿದ್ದೆವು. ಆದರೆ ಅವರು ನಮ್ಮ ಭಾವನೆಗಳಿಗೆ ಸ್ಪಂದಿಸದೆ ಇದ್ದಿದ್ದರಿಂದ ನಾವು ಬೇಸೆತ್ತು ನಿಶಾಂತ್ ಅವರನ್ನು ಬೆಂಬಲಿಸುತ್ತಿದ್ದೇವೆ. ನಿಶಾಂತ್ ಅವರು ನಮ್ಮ ಪ್ರತಿಯೊಂದು ಅಹವಾಲನ್ನು ಸ್ವೀಕರಿಸಿ ಜನರಿಗೆ ಅನುಕೂಲ ಕಲ್ಪಿಸುತ್ತ ಬಂದಿದ್ದಾರೆ.
ಮುಂದಿನ ದಿನಗಳಲ್ಲಿ ಜನ ಧ್ವನಿ ವೆಂಕಟೇಶ್ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಶೇಕಡ 70% ಕಾರ್ಯಕರ್ತರು ನಿಶಾಂತ್ ಅವರೊಂದಿಗೆ ಬರಲಿದ್ದಾರೆ ಎಂದು ತಿಳಿಸಿದರು. ವೆಂಕಟೇಶ್ ಬಣದಲ್ಲಿರುವ ಯುವಕರು ನಿಶಾಂತ್ ಜೊತೆಯಲ್ಲಿಯೇ ಇದ್ದರು

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

1 hour ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

1 hour ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

2 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

2 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

2 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

2 hours ago