ಜಿಲ್ಲೆಗಳು

ವೆಂಕಟೇಶ್ ಬಣದಲ್ಲಿರುವ ಯುವಕರು ನಿಶಾಂತ್ ಜೊತೆಯಲ್ಲಿಯೇ ಇದ್ದಾರೆ : ವೀರಶೈವ ಲಿಂಗಾಯತ ಮಹಾಸಭಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್

ಹನೂರು: ನಿಶಾಂತ್ ಬಳಗದಿಂದಲೇ ಪ್ರವಾಸಕ್ಕೆ ಹೋಗುತ್ತಿರುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದೇವೆ. ಆದರೆ ನಮ್ಮನ್ನು ಪ್ರವಾಸಕ್ಕೆ ಎಂದು ಕರೆದುಕೊಂಡು ಹೋಗಿ ನಿಶಾಂತ್ ಬಣಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಹೇಳಿರುವ ಮದುವನಹಳ್ಳಿ ಮಹೇಂದ್ರ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಒಡೆಯರ್ ಪಾಳ್ಯ ಗ್ರಾಮದ ವೀರಶೈವ ಲಿಂಗಾಯಿತ ಮಹಾಸಭಾ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಹೇಳಿದರು.

ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು. ಕಳೆದ ಎರಡು ತಿಂಗಳಿಂದ ಸಮಾಜ ಸೇವಕ ನಿಶಾಂತ್ ಮಾರ್ಗದರ್ಶನದಲ್ಲಿ ಪವರ್ ಆಫ್ ಯೂತ್ ಎಂಬ ಸಂಘಟನೆ ರಚಿಸಿಕೊಂಡು ಸಮಾಜ ಸೇವೆಯಲ್ಲಿ ತೊಡೆಸಿಕೊಂಡಿದ್ದೇವೆ. ಈ ಸಂಘಟನೆಯಿಂದ ಎಲ್ಲಾ ಕಾರ್ಯಕರ್ತರಿಗೂ ಪ್ರವಾಸವನ್ನು ಕೈಗೊಳ್ಳಲಾಗಿತ್ತು. ಅದರಲ್ಲಿ ಮಹೇಂದ್ರ ಮತ್ತು ಆತನ ಸ್ನೇಹಿತರಲ್ಲರೂ ಬಂದಿದ್ದರು. ಆದರೆ ಯಾರದೋ ಒತ್ತಡಕ್ಕೆ ಮಣಿದು, ನಮಗೆ ಮಾಹಿತಿ ನೀಡದೆ ನಿಶಾಂತ್ ಬೆಂಬಲಿಗರು ನಮ್ಮನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಿಕೆ ನೀಡಿರುವುದು ಹಾಸ್ಯಸ್ಪದ ಎಂದು ತಿಳಿಸಿದರು.

ನಾವು ಈಗಲೂ ವೆಂಕಟೇಶ್ ಬೆಂಬಲಿಗರಾಗಿಯೇ ಇದ್ದೇವೆ ಎಂದು ಹೇಳುತ್ತಿರುವ ಮಧುವನಳ್ಳಿ ಯುವಕರು ಈಗಲೂ ನಮ್ಮ ಸಂಪರ್ಕದಲ್ಲಿದ್ದಾರೆ. ಅವರನ್ನು ವಿಚಾರಿಸಿದಾಗ ನಾವು ಈಗಲೂ ನಿಶಾಂತ್ ಬಣದಲ್ಲಿಯೇ ಇದ್ದೇವೆ, ಯಾರದೋ ಒತ್ತಾಯಕ್ಕೆ ಮಾಡಿದ್ದು ಈ ಹೇಳಿಕೆ ನೀಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಜನ ಧ್ವನಿ ಬಿ.ವೆಂಕಟೇಶ್ ಅವರು ಕ್ಷೇತ್ರಕ್ಕೆ ಬಂದ ಪ್ರಾರಂಭದಲ್ಲಿ ನಾವು ಅವರೊಂದಿಗೆ ಗುರುತಿಸಿಕೊಂಡಿದ್ದೆವು. ಅವರಿಂದ ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ನಾವು ಜನರಿಗೆ ಸಾಕಷ್ಟು ಭರವಸೆಯನ್ನು ನೀಡಿದ್ದೆವು. ಆದರೆ ಅವರು ನಮ್ಮ ಭಾವನೆಗಳಿಗೆ ಸ್ಪಂದಿಸದೆ ಇದ್ದಿದ್ದರಿಂದ ನಾವು ಬೇಸೆತ್ತು ನಿಶಾಂತ್ ಅವರನ್ನು ಬೆಂಬಲಿಸುತ್ತಿದ್ದೇವೆ. ನಿಶಾಂತ್ ಅವರು ನಮ್ಮ ಪ್ರತಿಯೊಂದು ಅಹವಾಲನ್ನು ಸ್ವೀಕರಿಸಿ ಜನರಿಗೆ ಅನುಕೂಲ ಕಲ್ಪಿಸುತ್ತ ಬಂದಿದ್ದಾರೆ.
ಮುಂದಿನ ದಿನಗಳಲ್ಲಿ ಜನ ಧ್ವನಿ ವೆಂಕಟೇಶ್ ಬೆಂಬಲಿಗರಾಗಿ ಗುರುತಿಸಿಕೊಂಡಿರುವ ಶೇಕಡ 70% ಕಾರ್ಯಕರ್ತರು ನಿಶಾಂತ್ ಅವರೊಂದಿಗೆ ಬರಲಿದ್ದಾರೆ ಎಂದು ತಿಳಿಸಿದರು. ವೆಂಕಟೇಶ್ ಬಣದಲ್ಲಿರುವ ಯುವಕರು ನಿಶಾಂತ್ ಜೊತೆಯಲ್ಲಿಯೇ ಇದ್ದರು

andolana

Recent Posts

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…

31 seconds ago

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

22 mins ago

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

2 hours ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

2 hours ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

4 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

4 hours ago