ಜಿಲ್ಲೆಗಳು

ಇಲ್ಲಿ ತೀರ್ಥ ಪ್ರಸಾದ ತಂದ ನಂತರವಷ್ಟೆ ಗಣೇಶ ಹಬ್ಬಕ್ಕೆ ಚಾಲನೆ

ಗುಂಡ್ಲುಪೇಟೆ (ಬೇಗೂರು ) : ಇಲ್ಲಿ ಪ್ರತಿವರ್ಷವೂ ಗೌರಿ-ಗಣೇಶ ಹಬ್ಬಕ್ಕೆ ಚಾಲನೆ ಸಿಗುವುದು ಗ್ರಾಮದ ದೇವಮ್ಮನಗುಡಿ ಹಾಗೂ ವೀರನಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕವೆ,

ಹೊಸ ನೀರು ತರುತ್ತಿರುವುದು

ಹೌದು, ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಬಹತೇಕರು ಉಪ್ಪಾರ ಜನಾಂಗವೇ ವಾಸಿಸುತ್ತಿದ್ದಾರೆ. ಈ ಜನ ಗಳಿಗೆ ಮಾತ್ರ ಸೀಮಿತವಾಗಿರುವ ಈ ದೇವಾಲಯಕ್ಕೆ ಮನೆಗೊಬ್ಬರಂತೆ ಸದಸ್ಯರು ಒಗ್ಗೂಡಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ತಂದ ನಂತರವಷ್ಟೆ ಇಲ್ಲಿ ʼಗೌರಿ ಗಣೇಶ ಹಬ್ಬಕ್ಕೆ ಚಾಲನೆ. ಗ್ರಾಮದಿಂದ ಹೊರಹೊಲಯದಲ್ಲಿ ವೀರಗಲ್ಲನ್ನು ಪ್ರತಿಷ್ಠಾಪಿಸಲಾಗಿದ್ದು, ಹಬ್ಬದ ದಿನದಂದು ಅರಿಶಿಣ ಕುಂಕುಮಗಳಿಂದ ವೀರಗಲ್ಲನ್ನು ಸಿಂಗರಿಸಿ ಪೂಜಿಸಿ ಬಂದ ಬಳಿಕ ಭಕ್ತಾಧಿಗಳಿಗೆ ಸಿಹಿ ಪಾನಕವನ್ನು ವಿತರಿಸಲಾಗುತ್ತದೆ.

ಹೊಸ ನೀರು ತರುವಲ್ಲಿ ಮಕ್ಕ:ಳು, ಹಿರಿಯರು ನಿರತ

ಹೊಸ ನೀರು : ಗೌರಿ ಹಬ್ಬಕ್ಕೆ ಇಡೀ ಮನೆಯನ್ನು ಸಂಪೂರ್ಣವಾಗಿ ಶುಚಿಗೊಳಿಸಿ ಸುಣ್ಣ-ಬಣ್ಣಗಳಿಂದ ಅಲಂಕರಿಸಿ ನಂತರ ಮಹಿಳೆಯರೆಲ್ಲ ಒಗ್ಗೂಡಿ ಕೊಡಗಳನ್ನಿಡಿದು ಹೊಸ ನೀರು ತಂದು ಅದರಲ್ಲಿ ಹಬ್ಬದ ಅಡುಗೆ ಮಾಡುವುದರಂದ ಇದು ಹೊಸ ನೀರು ತರುವುದು ಎಂದೇ ಪ್ರಸಿದ್ಧಿಗೊಂಡಿದೆ. ಇಲ್ಲಿ ಗುಂಪು-ಗುಂಪಾಗಿ ಚಿಕ್ಕ ಮಕ್ಕಳು ಕೂಡ ಕೊಡಗಳನ್ನು ಹಿಡಿದು ಬರುವುದು ಸರ್ವೇ ಸಾಮಾನ್ಯವಾಗಿರುತ್ತದೆ. ಇದು ಗ್ರಾಮೀಣ ಭಾಗದಲ್ಲಿ ಇನ್ನೂ ಉಳಿದುಕೊಂಡು ಬಂದಿರುವ ವಿಶೇಷ ಪದ್ಧತಿಯಾಗಿದೆ.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

43 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

59 mins ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago