ಗುಂಡ್ಲುಪೇಟೆ (ಬೇಗೂರು ) : ಇಲ್ಲಿ ಪ್ರತಿವರ್ಷವೂ ಗೌರಿ-ಗಣೇಶ ಹಬ್ಬಕ್ಕೆ ಚಾಲನೆ ಸಿಗುವುದು ಗ್ರಾಮದ ದೇವಮ್ಮನಗುಡಿ ಹಾಗೂ ವೀರನಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕವೆ,
ಹೌದು, ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಬಹತೇಕರು ಉಪ್ಪಾರ ಜನಾಂಗವೇ ವಾಸಿಸುತ್ತಿದ್ದಾರೆ. ಈ ಜನ ಗಳಿಗೆ ಮಾತ್ರ ಸೀಮಿತವಾಗಿರುವ ಈ ದೇವಾಲಯಕ್ಕೆ ಮನೆಗೊಬ್ಬರಂತೆ ಸದಸ್ಯರು ಒಗ್ಗೂಡಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ತಂದ ನಂತರವಷ್ಟೆ ಇಲ್ಲಿ ʼಗೌರಿ ಗಣೇಶ ಹಬ್ಬಕ್ಕೆ ಚಾಲನೆ. ಗ್ರಾಮದಿಂದ ಹೊರಹೊಲಯದಲ್ಲಿ ವೀರಗಲ್ಲನ್ನು ಪ್ರತಿಷ್ಠಾಪಿಸಲಾಗಿದ್ದು, ಹಬ್ಬದ ದಿನದಂದು ಅರಿಶಿಣ ಕುಂಕುಮಗಳಿಂದ ವೀರಗಲ್ಲನ್ನು ಸಿಂಗರಿಸಿ ಪೂಜಿಸಿ ಬಂದ ಬಳಿಕ ಭಕ್ತಾಧಿಗಳಿಗೆ ಸಿಹಿ ಪಾನಕವನ್ನು ವಿತರಿಸಲಾಗುತ್ತದೆ.
ಹೊಸ ನೀರು : ಗೌರಿ ಹಬ್ಬಕ್ಕೆ ಇಡೀ ಮನೆಯನ್ನು ಸಂಪೂರ್ಣವಾಗಿ ಶುಚಿಗೊಳಿಸಿ ಸುಣ್ಣ-ಬಣ್ಣಗಳಿಂದ ಅಲಂಕರಿಸಿ ನಂತರ ಮಹಿಳೆಯರೆಲ್ಲ ಒಗ್ಗೂಡಿ ಕೊಡಗಳನ್ನಿಡಿದು ಹೊಸ ನೀರು ತಂದು ಅದರಲ್ಲಿ ಹಬ್ಬದ ಅಡುಗೆ ಮಾಡುವುದರಂದ ಇದು ಹೊಸ ನೀರು ತರುವುದು ಎಂದೇ ಪ್ರಸಿದ್ಧಿಗೊಂಡಿದೆ. ಇಲ್ಲಿ ಗುಂಪು-ಗುಂಪಾಗಿ ಚಿಕ್ಕ ಮಕ್ಕಳು ಕೂಡ ಕೊಡಗಳನ್ನು ಹಿಡಿದು ಬರುವುದು ಸರ್ವೇ ಸಾಮಾನ್ಯವಾಗಿರುತ್ತದೆ. ಇದು ಗ್ರಾಮೀಣ ಭಾಗದಲ್ಲಿ ಇನ್ನೂ ಉಳಿದುಕೊಂಡು ಬಂದಿರುವ ವಿಶೇಷ ಪದ್ಧತಿಯಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…