ಜಿಲ್ಲೆಗಳು

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮಾ ಹಬ್ಬ ಮಾಡುವ ಮನಸಿದೆ: ಅಶೋಕ ಕಶ್ಯಪ್

ಮೈಸೂರು: ಮುಂದಿನ ವರ್ಷ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮಾ ಹಬ್ಬವನ್ನು ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ ಕಶ್ಯಪ್ ತಿಳಿಸಿದರು.

ರಂಗಾಯಣದ ಈ ರಂಗೋತ್ಸವ ಕಾರ್ಯಕ್ರಮದಲ್ಲಿ ಸಿನಿಮಾಗೂ ಆದ್ಯತೆ ನೀಡುವ ಮೂಲಕ ಸಿನಿಮಾ ಕಲೆ, ಜ್ಞಾನವನ್ನು ತಿಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದರೇ ಅದಕ್ಕೆ ಒಂದು ಸಂಸ್ಥೆ ಇರಬೇಕು. ಕಲೆಯನ್ನು ಕಲಿಸುವ ಮತ್ತು ಬೆಳೆಸುವ ಕೆಲಸವನ್ನು ಈ ರಂಗಾಯಣ ಮಾಡುತ್ತಿದೆ. ನನಗೂ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮಾ ಹಬ್ಬ ಆಚರಿಸುವ ಮನಸ್ಸಿದ್ದು, ಇದನ್ನು ಸರ್ಕಾರದ ಮುಂದಿಡುವೆ ಎಂದರು.
ಪ್ರಕೃತಿ ಪ್ರಿಯವಾಗಲಿ: ಪ್ರಕೃತಿ ನನಗೆ ಬದುಕಿನ ಭರವಸೆ ನೀಡಿದೆ.ಅವರ ಮುಂದೆ ನಾವೆಲ್ಲ ಸಣ್ಣವರು. ನನಗೆ ಕ್ಯಾನ್ಸರ್ ಇತ್ತು. ವೈದ್ಯರು ಎರಡು ವರ್ಷ ಇರುತ್ತೀರಾ. ಪ್ರಕೃತಿ ಮಡಿಲಿನಲ್ಲಿ ಸಮಯ ಕಳೆಯಿರಿ ಎಂದರು. ನಾನು ತೀರ್ಥಹಳ್ಳಿ ಕಡೆ ಹೋಗಿ ಮನೆ ಮಾಡಿದೆ. ಈಗ ಹದಿನೇಳು ವರ್ಷ ಬದುಕಿದ್ದೀನಿ. ಪ್ರಕೃತಿ, ಹಸಿರನ್ನು ಎಲ್ಲರೂ ಅಪ್ಪಿಕೊಳ್ಳಬೇಕು, ಅದನ್ನು ಕಾಪಾಡಿಕೊಳ್ಳಬೇಕು ಎಂದರು.

ಸಿನಿಮಾ ಪ್ರದರ್ಶನ

ಬಹುರೂಪಿ ಚಲನಚಿತ್ರೋತ್ಸವದ ಮೊದಲ ದಿನವಾದ ಶುಕ್ರವಾರ ಉಮೇಶ್ ಅಗರ್‌ವಾಲ್ ನಿರ್ದೇಶನದ ಜೈ ಹೋ-ಎ ಫಿಲ್ಮ್ ಎ.ಆರ್.ರೆಹಮಾನ್ ಹಿಂದಿ ಚಿತ್ರ ಮತ್ತು ಟ್ರೆಸಿಂಗ್ ರೈತರ್ ಶೆರ್ಪಾ ಅವರ ನಿರ್ದೇಶನದ ಕರ್ಮ ಎಂಬ ನೇಪಾಳಿ ಚಿತ್ರಗಳನ್ನು ಪುನೀತ್ ರಾಜ್ ಕುಮಾರ್ (ಶ್ರೀರಂಗ ರಂಗಮಂದಿರ) ಅವರ ಚಿತ್ರಮಂದಿರದಲ್ಲಿ ಪ್ರದರ್ಶಿಸಲಾಯಿತು. ಜೈ ಹೋ-ಎ ಫಿಲ್ಮ್ ಎ.ಆರ್.ರೆಹಮಾನ್ ಚಿತ್ರ ವೀಕ್ಷಣೆಗೆ ಇದ್ದಷ್ಟು ಪ್ರೇಕ್ಷಕರು ಮಧ್ಯಾಹ್ನದ ಕರ್ಮ ಚಿತ್ರ ನೋಡಲು ಇರಲಿಲ್ಲ. ಹೀಗಾಗಿ, ಮಧ್ಯಾಹ್ನ ಬಹುತೇಕ ಸೀಟುಗಳು ಖಾಲಿಯಿದ್ದವು.

andolana

Recent Posts

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

1 hour ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

2 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

3 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

3 hours ago

ಓದುಗರ ಪತ್ರ: ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಿ

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…

3 hours ago

ಓದುಗರ ಪತ್ರ: ವಾಣಿಜ್ಯ ಸಿಲಿಂಡರ್ ದರ ಏರಿಕೆ ಬರೆ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್‌ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್‌ಗಳಲ್ಲಿ…

3 hours ago