ಜಿಲ್ಲೆಗಳು

‘ಅಲ್ಲಿ ವಾಯುಭಾರ ಕುಸಿತ, ಇಲ್ಲಿ ಮಳೆ ಹನಿಗಳ ಮೊರೆತ’

ಮಳೆ, ಮಂಜು, ಚಳಿ: ಅಕ್ಷರಶಃ ಮಡಿಕೇರಿಯಂತಾದ ಮೈಸೂರು

ಮೈಸೂರು :‘ಅಲ್ಲೆಲ್ಲೋ ವಾಯುಭಾರ ಕುಸಿತ, ಇಲ್ಲಿ ಹೀಗೇಕೆ ಮಳೆ ಹನಿಗಳ ಮೊರೆತ?’ ಎಂಬ ಪ್ರಶ್ನೆಯೊಂದಿಗೆ, ಬೆಚ್ಚಗಿರಬೇಕೇನ್ನಿಸುವ ತಣ್ಣನೆಯ ಮಂಕು ಮೈಸೂರಿಗರನ್ನು ಆವರಿಸಿಕೊಂಡಿದೆ.

ಹೌದು…ನಗರದಲ್ಲಿ ಶುಕ್ರವಾರದಿಂದ ಜಿನುಗುತ್ತಿರುವ ಜಿಟಿ ಮಳೆ ಮೈಸೂರನ್ನು ಅಕ್ಷರಶಃ ಮಡಿಕೇರಿಯಂತಾಗಿಸಿದೆ. ಸಧ್ಯ ನಗರ ಮಂಜು ಮತ್ತು ಮಳೆಯ ಸಂಯೋಜಿತವಾಗಿದ್ದು, ಚಳಿ ವಾತಾವರಣವನ್ನು ನಿರ್ಮಾಣ ಮಾಡಿದೆ.

ಇನ್ನು ಶನಿವಾರವೂ ಮುಂಜಾವಿನಿಂದಲೇ ಮುಗಿಲಲ್ಲಿ ಕಾರ್ಮೋಡ ದಟ್ಟೈಸಿತ್ತು. ಆಗಾಗ ತುಂತುರು ಮಳೆಯ ಸಿಂಚನವಾಗುತ್ತಿದೆ. ಹೀಗಾಗಿ ಶಾಲಾ, ಕಾಲೇಜು ಹಾಗೂ ಕಚೇರಿಗೆ ತೆರಳುವವರು ಬೆಚ್ಚನೆಯ ಉಡುಪು ಧರಿಸಿ ರಸ್ತೆಗಿಳಿದಿದ್ದ ದೃಶ್ಯ ಕಂಡುಬಂದವು. ಕೆಲವರು ಮಳೆಯಿಂದ ರಕ್ಷಣೆ ಪಡೆಯಲು ಕೊಡೆಗಳ ಮೊರೆ ಹೋಗಿದ್ದರು. ಮೈ ನಡುಗಿಸುತ್ತಿದ್ದ ಚಳಿಯಿಂದ ತಪ್ಪಿಸಿಕೊಳ್ಳಲು ಕಿವಿಗೆ ಹತ್ತಿ ಹಾಗೂ ಕಿವಿ ಮುಚ್ಚುವ ಟೋಪಿಗಳನ್ನು ಧರಿಸಿ ಓಡಾಡುತ್ತಿದ್ದರು.

ಎರಡು ದಿನಗಳ ನಿರಂತರ ಮಳೆಯಿಂದಾಗಿ ಕೆಲವೆಡೆ ರಸ್ತೆಯಲ್ಲಿ ಮಳೆ ನೀರು ಹರಿಯಿತು. ರಸ್ತೆಯ ಗುಂಡಿಗಳಲ್ಲಿ ನೀರು ಸಂಗ್ರಹವಾಗಿದೆ. ಕೆಲವು ರಸ್ತೆಗಳು ಕೆಸರುಮಯವಾಗಿದ್ದವು. ಹೀಗಾಗಿ ಪಾದಚಾರಿಗಳು ಪರದಾಡಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ.

andolana

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

7 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

7 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

7 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

7 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

8 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

8 hours ago