ಜಿಲ್ಲೆಗಳು

‘ಅಲ್ಲಿ ವಾಯುಭಾರ ಕುಸಿತ, ಇಲ್ಲಿ ಮಳೆ ಹನಿಗಳ ಮೊರೆತ’

ಮಳೆ, ಮಂಜು, ಚಳಿ: ಅಕ್ಷರಶಃ ಮಡಿಕೇರಿಯಂತಾದ ಮೈಸೂರು

ಮೈಸೂರು :‘ಅಲ್ಲೆಲ್ಲೋ ವಾಯುಭಾರ ಕುಸಿತ, ಇಲ್ಲಿ ಹೀಗೇಕೆ ಮಳೆ ಹನಿಗಳ ಮೊರೆತ?’ ಎಂಬ ಪ್ರಶ್ನೆಯೊಂದಿಗೆ, ಬೆಚ್ಚಗಿರಬೇಕೇನ್ನಿಸುವ ತಣ್ಣನೆಯ ಮಂಕು ಮೈಸೂರಿಗರನ್ನು ಆವರಿಸಿಕೊಂಡಿದೆ.

ಹೌದು…ನಗರದಲ್ಲಿ ಶುಕ್ರವಾರದಿಂದ ಜಿನುಗುತ್ತಿರುವ ಜಿಟಿ ಮಳೆ ಮೈಸೂರನ್ನು ಅಕ್ಷರಶಃ ಮಡಿಕೇರಿಯಂತಾಗಿಸಿದೆ. ಸಧ್ಯ ನಗರ ಮಂಜು ಮತ್ತು ಮಳೆಯ ಸಂಯೋಜಿತವಾಗಿದ್ದು, ಚಳಿ ವಾತಾವರಣವನ್ನು ನಿರ್ಮಾಣ ಮಾಡಿದೆ.

ಇನ್ನು ಶನಿವಾರವೂ ಮುಂಜಾವಿನಿಂದಲೇ ಮುಗಿಲಲ್ಲಿ ಕಾರ್ಮೋಡ ದಟ್ಟೈಸಿತ್ತು. ಆಗಾಗ ತುಂತುರು ಮಳೆಯ ಸಿಂಚನವಾಗುತ್ತಿದೆ. ಹೀಗಾಗಿ ಶಾಲಾ, ಕಾಲೇಜು ಹಾಗೂ ಕಚೇರಿಗೆ ತೆರಳುವವರು ಬೆಚ್ಚನೆಯ ಉಡುಪು ಧರಿಸಿ ರಸ್ತೆಗಿಳಿದಿದ್ದ ದೃಶ್ಯ ಕಂಡುಬಂದವು. ಕೆಲವರು ಮಳೆಯಿಂದ ರಕ್ಷಣೆ ಪಡೆಯಲು ಕೊಡೆಗಳ ಮೊರೆ ಹೋಗಿದ್ದರು. ಮೈ ನಡುಗಿಸುತ್ತಿದ್ದ ಚಳಿಯಿಂದ ತಪ್ಪಿಸಿಕೊಳ್ಳಲು ಕಿವಿಗೆ ಹತ್ತಿ ಹಾಗೂ ಕಿವಿ ಮುಚ್ಚುವ ಟೋಪಿಗಳನ್ನು ಧರಿಸಿ ಓಡಾಡುತ್ತಿದ್ದರು.

ಎರಡು ದಿನಗಳ ನಿರಂತರ ಮಳೆಯಿಂದಾಗಿ ಕೆಲವೆಡೆ ರಸ್ತೆಯಲ್ಲಿ ಮಳೆ ನೀರು ಹರಿಯಿತು. ರಸ್ತೆಯ ಗುಂಡಿಗಳಲ್ಲಿ ನೀರು ಸಂಗ್ರಹವಾಗಿದೆ. ಕೆಲವು ರಸ್ತೆಗಳು ಕೆಸರುಮಯವಾಗಿದ್ದವು. ಹೀಗಾಗಿ ಪಾದಚಾರಿಗಳು ಪರದಾಡಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ.

andolana

Recent Posts

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…

1 hour ago

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…

1 hour ago

ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…

1 hour ago

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

2 hours ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

2 hours ago

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

2 hours ago