ಮೈಸೂರು :‘ಅಲ್ಲೆಲ್ಲೋ ವಾಯುಭಾರ ಕುಸಿತ, ಇಲ್ಲಿ ಹೀಗೇಕೆ ಮಳೆ ಹನಿಗಳ ಮೊರೆತ?’ ಎಂಬ ಪ್ರಶ್ನೆಯೊಂದಿಗೆ, ಬೆಚ್ಚಗಿರಬೇಕೇನ್ನಿಸುವ ತಣ್ಣನೆಯ ಮಂಕು ಮೈಸೂರಿಗರನ್ನು ಆವರಿಸಿಕೊಂಡಿದೆ.
ಹೌದು…ನಗರದಲ್ಲಿ ಶುಕ್ರವಾರದಿಂದ ಜಿನುಗುತ್ತಿರುವ ಜಿಟಿ ಮಳೆ ಮೈಸೂರನ್ನು ಅಕ್ಷರಶಃ ಮಡಿಕೇರಿಯಂತಾಗಿಸಿದೆ. ಸಧ್ಯ ನಗರ ಮಂಜು ಮತ್ತು ಮಳೆಯ ಸಂಯೋಜಿತವಾಗಿದ್ದು, ಚಳಿ ವಾತಾವರಣವನ್ನು ನಿರ್ಮಾಣ ಮಾಡಿದೆ.
ಇನ್ನು ಶನಿವಾರವೂ ಮುಂಜಾವಿನಿಂದಲೇ ಮುಗಿಲಲ್ಲಿ ಕಾರ್ಮೋಡ ದಟ್ಟೈಸಿತ್ತು. ಆಗಾಗ ತುಂತುರು ಮಳೆಯ ಸಿಂಚನವಾಗುತ್ತಿದೆ. ಹೀಗಾಗಿ ಶಾಲಾ, ಕಾಲೇಜು ಹಾಗೂ ಕಚೇರಿಗೆ ತೆರಳುವವರು ಬೆಚ್ಚನೆಯ ಉಡುಪು ಧರಿಸಿ ರಸ್ತೆಗಿಳಿದಿದ್ದ ದೃಶ್ಯ ಕಂಡುಬಂದವು. ಕೆಲವರು ಮಳೆಯಿಂದ ರಕ್ಷಣೆ ಪಡೆಯಲು ಕೊಡೆಗಳ ಮೊರೆ ಹೋಗಿದ್ದರು. ಮೈ ನಡುಗಿಸುತ್ತಿದ್ದ ಚಳಿಯಿಂದ ತಪ್ಪಿಸಿಕೊಳ್ಳಲು ಕಿವಿಗೆ ಹತ್ತಿ ಹಾಗೂ ಕಿವಿ ಮುಚ್ಚುವ ಟೋಪಿಗಳನ್ನು ಧರಿಸಿ ಓಡಾಡುತ್ತಿದ್ದರು.
ಎರಡು ದಿನಗಳ ನಿರಂತರ ಮಳೆಯಿಂದಾಗಿ ಕೆಲವೆಡೆ ರಸ್ತೆಯಲ್ಲಿ ಮಳೆ ನೀರು ಹರಿಯಿತು. ರಸ್ತೆಯ ಗುಂಡಿಗಳಲ್ಲಿ ನೀರು ಸಂಗ್ರಹವಾಗಿದೆ. ಕೆಲವು ರಸ್ತೆಗಳು ಕೆಸರುಮಯವಾಗಿದ್ದವು. ಹೀಗಾಗಿ ಪಾದಚಾರಿಗಳು ಪರದಾಡಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…