ಮೈಸೂರು :‘ಅಲ್ಲೆಲ್ಲೋ ವಾಯುಭಾರ ಕುಸಿತ, ಇಲ್ಲಿ ಹೀಗೇಕೆ ಮಳೆ ಹನಿಗಳ ಮೊರೆತ?’ ಎಂಬ ಪ್ರಶ್ನೆಯೊಂದಿಗೆ, ಬೆಚ್ಚಗಿರಬೇಕೇನ್ನಿಸುವ ತಣ್ಣನೆಯ ಮಂಕು ಮೈಸೂರಿಗರನ್ನು ಆವರಿಸಿಕೊಂಡಿದೆ.
ಹೌದು…ನಗರದಲ್ಲಿ ಶುಕ್ರವಾರದಿಂದ ಜಿನುಗುತ್ತಿರುವ ಜಿಟಿ ಮಳೆ ಮೈಸೂರನ್ನು ಅಕ್ಷರಶಃ ಮಡಿಕೇರಿಯಂತಾಗಿಸಿದೆ. ಸಧ್ಯ ನಗರ ಮಂಜು ಮತ್ತು ಮಳೆಯ ಸಂಯೋಜಿತವಾಗಿದ್ದು, ಚಳಿ ವಾತಾವರಣವನ್ನು ನಿರ್ಮಾಣ ಮಾಡಿದೆ.
ಇನ್ನು ಶನಿವಾರವೂ ಮುಂಜಾವಿನಿಂದಲೇ ಮುಗಿಲಲ್ಲಿ ಕಾರ್ಮೋಡ ದಟ್ಟೈಸಿತ್ತು. ಆಗಾಗ ತುಂತುರು ಮಳೆಯ ಸಿಂಚನವಾಗುತ್ತಿದೆ. ಹೀಗಾಗಿ ಶಾಲಾ, ಕಾಲೇಜು ಹಾಗೂ ಕಚೇರಿಗೆ ತೆರಳುವವರು ಬೆಚ್ಚನೆಯ ಉಡುಪು ಧರಿಸಿ ರಸ್ತೆಗಿಳಿದಿದ್ದ ದೃಶ್ಯ ಕಂಡುಬಂದವು. ಕೆಲವರು ಮಳೆಯಿಂದ ರಕ್ಷಣೆ ಪಡೆಯಲು ಕೊಡೆಗಳ ಮೊರೆ ಹೋಗಿದ್ದರು. ಮೈ ನಡುಗಿಸುತ್ತಿದ್ದ ಚಳಿಯಿಂದ ತಪ್ಪಿಸಿಕೊಳ್ಳಲು ಕಿವಿಗೆ ಹತ್ತಿ ಹಾಗೂ ಕಿವಿ ಮುಚ್ಚುವ ಟೋಪಿಗಳನ್ನು ಧರಿಸಿ ಓಡಾಡುತ್ತಿದ್ದರು.
ಎರಡು ದಿನಗಳ ನಿರಂತರ ಮಳೆಯಿಂದಾಗಿ ಕೆಲವೆಡೆ ರಸ್ತೆಯಲ್ಲಿ ಮಳೆ ನೀರು ಹರಿಯಿತು. ರಸ್ತೆಯ ಗುಂಡಿಗಳಲ್ಲಿ ನೀರು ಸಂಗ್ರಹವಾಗಿದೆ. ಕೆಲವು ರಸ್ತೆಗಳು ಕೆಸರುಮಯವಾಗಿದ್ದವು. ಹೀಗಾಗಿ ಪಾದಚಾರಿಗಳು ಪರದಾಡಬೇಕಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ.
ಹಾಸನ: 10 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಪ್ರೀ ವೆಡ್ಡಿಂಗ್ ಶೂಟ್ಗೆ ಹೂಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಟ್ಟಿರುವ…
ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು…
ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…