ಜಿಲ್ಲೆಗಳು

ಬಿಜೆಪಿಯಲ್ಲಿ ಯಾರಿಗೂ ಕಿರುಕುಳದ ವಾತಾವರಣ ಇಲ್ಲ: ಎಸ್‌ ಟಿಎಸ್

ಮೈಸೂರು: ಬಿಜೆಪಿಯಲ್ಲಿ ಯಾರಿಗೂ ಕಿರುಕುಳ ನೀಡುವ ವಾತಾವರಣ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ಎಸ್.ಎ.ರಾಮದಾಸ್ ಆರೋಪಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ರಾಮದಾಸ್ ಹಿರಿಯ ನಾಯಕರಾಗಿದ್ದು, ತಮ್ಮ ಸುದೀರ್ಘ ರಾಜಕಾರಣದಲ್ಲಿ ಯಾರಿಗೂ ಕಿರುಕುಳ ನೀಡಿಲ್ಲ. ಅವರು ಬೇರೆಯವರಿಗೆ ಕಿರುಕುಳ ನೀಡಿಲ್ಲ ಎಂದ ಮೇಲೆ ಅವರಿಗೆ ಯಾರು ಕಿರುಕುಳ ನೀಡುತ್ತಾರೆ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಮಾಜಿ ಮಂತ್ರಿ ಹಾಗೂ ಅನುಭವ ರಾಜಕಾರಣಿಯಾಗಿರುವ ಎಸ್.ಎ. ರಾಮದಾಸ್ ಅವರಿಗೆ ಯಾರು ಕೂಡ ಮನಸ್ಸು ನೋಯಿಸುವ ಕೆಲಸ ಮಾಡುವುದಿಲ್ಲ ಎಂಬ ವಿಶ್ವಾಸ ಇದೆ. ನಾನು ಬಿಜೆಪಿಗೆ ಬಂದು ಮೂರು ವರ್ಷವಾಗಿದ್ದು, ನಾನು ಕಂಡಂತೆ ಬಿಜೆಪಿಯಲ್ಲಿ ಕಿರುಕುಳದ ವಾತಾವರಣ ಇಲ್ಲ. ರಾಮದಾಸ್ ನನಗಿಂತ ಹಳೆಯ ನಾಯಕರಾಗಿದ್ದು, ಈ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿದೆ ಎಂದರು.

ಮೈಸೂರಿನ ಬಸ್ ತಂಗುದಾಣದ ವಿವಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಗಮನಕ್ಕೆ ಹೋಗಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಎರಡು ದಿನಗಳಲ್ಲಿ ಸಮಸ್ಯೆ ಬಗೆ ಹರಿಯಲಿದೆ ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕೃರಣೆ ವಿವಾದ ಸಂಬಂಧ ಪ್ರತಿಕ್ರಿಯಿಸಿದ ಅವರು, ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಮತ್ತು ಹೆಸರು ಬಿಡುವುದು ನಿರಂತರ ಪ್ರಕ್ರಿಯೆ ಆಗಿದೆ. ಇಂದು ಈ ಬಡಾಬಣೆಯಲ್ಲಿ ಇರುವವರು ಮುಂದೆ ಬೇರೆ ಬಡಾವಣೆಗೆ ಹೋಗುತ್ತಾರೆ. ಆಗ ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡಿಸಿಕೊಳ್ಳುತ್ತಾರೆ. ಈ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಉತ್ತರ ನೀಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಎಷ್ಟು ಹೊಸ ಮತದಾರರು ಸೇರಿದ್ದಾರೆ. ಎಷ್ಟು ಮತದಾರರನ್ನು ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ ಎಂದರು. ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡಲು ಕಾಂಗ್ರೆಸ್ ನಾಯಕರಿಗೆ ಏನು ಕಾಣುತ್ತಿಲ್ಲ. ಸದ್ಯ ಚುನಾವಣೆ ಹತ್ತಿರ ಬರುತ್ತಿರುವ ಕಾರಣ ಕುಂಟು ನೆಪ ಹೇಳಿಕೊಂಡು ಟೀಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ನ ಯಾವ ಆಟವೂ ನಡೆಯುವುದಿಲ್ಲ ಎಂದರು. ಮಂಗಳೂರಿನಲ್ಲಿನ ಸ್ಛೋಟ ಸಂಬಂಧ ಪ್ರತಿಕ್ರಿಯಿಸಿದ ಅವರು, ನಗರ ಪೊಲೀಸ್ ಆಯುಕ್ತರು ಈ ಸಂಬಂಧ ಚರ್ಚೆ ನಡೆಸಿದ್ದಾರೆ. ಮೈಸೂರಿನಲ್ಲೂ ಬಿಗಿ ಭದ್ರತೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮಂಗಳೂರಿನಲ್ಲೂ ಬಿಗಿ ಭದ್ರತೆ ಮಾಡಲಾಗಿದೆ ಎಂದರು.

ಮೈಸೂರಿನಲ್ಲಿ ಬಿಗಿ ಬಂದೋಬಸ್ತ್
ಮಂಗಳೂರಿನಲ್ಲಿ ನಡೆದ ಆಟೋ ಸ್ಟೋಟ ಪ್ರಕರಣ ಸಂಬಂಧ ಮೈಸೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲಾಗಿದ್ದು, ಸೂಕ್ತ ಬಂದೋ ಬಸ್ತ್ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. ಈ ಸಂಬಂಧ ನಗರ ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಅಗತ್ಯ ಬಿಗಿ ಭದ್ರತೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

andolana

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

6 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

6 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

7 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

8 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

9 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

10 hours ago