ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೂರು ನೀಡದೂ ಸಿಗದ ಸ್ಪಂದನೆ: ಸ್ಥಳೀಯರ ಆಕ್ರಂದನ
ಕಾಮಗೆರೆ: ಜಿಲ್ಲೆಯಲ್ಲೇ ಅತೀ ಹಳೆಯದಾದ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್ಸಿ)ಕ್ಕೆ ಖಾಯಂ ವೈದ್ಯರೇ ಇಲ್ಲ. ಈ ಕುರಿತು ಸ್ಥಳೀಯ ಶಾಸಕ ನರೇಂದ್ರ ಸಹಿತ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ವೈದ್ಯರನ್ನು ನೇಮಿಸಿಲ್ಲ. ಇದರಿಂದ ಕಾಮಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಬಡವರಂತೂ ಹೆಚ್ಚು ಹಣ ನೀಡಲೂ ಆಗದೇ, ಸೂಕ್ತ ಸೌಲಭ್ಯವೂ ದೊರಕದೇ ಕಷ್ಟ ಅನುಭವಿಸುತ್ತಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ವ್ಯಾಪ್ತಿಯಲ್ಲಿದ್ದರೂ ಹನೂರು ವಿಧಾನಸಭಾ ಕ್ಷೇತ್ರದಡಿ ಬರುವ ಅತಿ ದೊಡ್ಡ ಊರು ಕಾಮಗೆರೆಗೆ1962 ರಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಯಿತು. ಈಗಂತೂ 10 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸೌಲಭ್ಯವನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದರು. ಇಲ್ಲಿ ಇಬ್ಬರು ವೈದ್ಯರ ಸೇವೆ ನೀಡಲಾಗಿತ್ತು. ಆದರೆ ಡಾ.ಲಾವಣ್ಯ ಎನ್ನುವವರು ಉನ್ನತ ಶಿಕ್ಷಣಕ್ಕೆ ತೆರಳಿದರೆ, ತರಬೇತಿಗೆ ಬಂದ ವೈದ್ಯರೂ ರಜೆ ಮೇಲೆ ತೆರಳಿದ್ದಾರೆ. ಇದರಿಂದ ಜನರ ಕಷ್ಟ ಹೇಳತೀರದು. ಇರುವ ನರ್ಸ್ಗಳೇ ಸೇವೆ ನೀಡುತ್ತಿದ್ದು, ಜನ ಏನಾದರೂ ತೊಂದರೆಯಾದರೆ ಹೇಗೆ ಎನ್ನುವ ಭಯದಲ್ಲಿಯೇ ಆಸ್ಪತ್ರೆಗೆ ಬರುತ್ತಿದ್ಧಾರೆ.
ಈ ಕುರಿತು ಸ್ಥಳೀಯರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳೀಯ ಶಾಸಕ ಆರ್.ನರೇಂದ್ರ ಅವರಿಗೂ ವೈದ್ಯರ ಕೊರತೆಯಿಂದ ಆಗುತ್ತಿರುವ ತೊಂದರೆಯನ್ನು ಗಮನಕ್ಕೆ ತಂದರೂ ಅವರು ರಾಜಕೀಯ ಕಾರಣಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಕಾಮಗೆರೆಯ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಶಾಸಕರು ಸ್ವಗ್ರಾಮ ದೊಡ್ಡಿಂದುವಾಡಿ ಸಹಿತ ಬೇರೆ ಬೇರೆ ಊರುಗಳಿಗೆ ನೀಡುವ ಮಾನ್ಯತೆಯನ್ನು ಕಾಮಗೆರೆಗೂ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೇ ಜಿಲ್ಲಾಧಿಕಾರಿ ಡಾ.ಡಿ.ಎಸ್.ರಮೇಶ್, ಡಿಎಚ್ಒ ಡಾ.ವಿಶ್ವೇಶ್ವರಯ್ಯ ಅವರಿಗೂ ಕರೆ ಮಾಡಿ ವೈದ್ಯರನ್ನು ಕೂಡಲೇ ನಿಯೋಜಿಸುವಂತೆ ಕೋರಿದ್ದು, ಅದಕ್ಕೆ ಪೂರಕ ಸ್ಪಂದನೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ.
ಕಾಮಗೆರೆ ಗ್ರಾಮದ ಪಿಎಚ್ಸಿಗೆ ವೈದ್ಯರೇ ಇಲ್ಲ ಎನ್ನುವ ವಿಷಯ ಗಮನಕ್ಕೆ ಬಂದಿದೆ. ಕೂಡಲೇ ಡಿಎಚ್ಒ ಅವರಿಗೆ ತಿಳಿಸಿ ವೈದ್ಯರ ಸೇವೆ ಲಭ್ಯವಾಗುವಂತೆ ಮಾಡುತ್ತೇನೆ.
-ಡಾ.ಡಿ.ಎಸ್.ರಮೇಶ್, ಡಿಸಿ ಚಾಮರಾಜನಗರ
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…