ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೂರು ನೀಡದೂ ಸಿಗದ ಸ್ಪಂದನೆ: ಸ್ಥಳೀಯರ ಆಕ್ರಂದನ
ಕಾಮಗೆರೆ: ಜಿಲ್ಲೆಯಲ್ಲೇ ಅತೀ ಹಳೆಯದಾದ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್ಸಿ)ಕ್ಕೆ ಖಾಯಂ ವೈದ್ಯರೇ ಇಲ್ಲ. ಈ ಕುರಿತು ಸ್ಥಳೀಯ ಶಾಸಕ ನರೇಂದ್ರ ಸಹಿತ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ವೈದ್ಯರನ್ನು ನೇಮಿಸಿಲ್ಲ. ಇದರಿಂದ ಕಾಮಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಬಡವರಂತೂ ಹೆಚ್ಚು ಹಣ ನೀಡಲೂ ಆಗದೇ, ಸೂಕ್ತ ಸೌಲಭ್ಯವೂ ದೊರಕದೇ ಕಷ್ಟ ಅನುಭವಿಸುತ್ತಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ವ್ಯಾಪ್ತಿಯಲ್ಲಿದ್ದರೂ ಹನೂರು ವಿಧಾನಸಭಾ ಕ್ಷೇತ್ರದಡಿ ಬರುವ ಅತಿ ದೊಡ್ಡ ಊರು ಕಾಮಗೆರೆಗೆ1962 ರಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಯಿತು. ಈಗಂತೂ 10 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸೌಲಭ್ಯವನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದರು. ಇಲ್ಲಿ ಇಬ್ಬರು ವೈದ್ಯರ ಸೇವೆ ನೀಡಲಾಗಿತ್ತು. ಆದರೆ ಡಾ.ಲಾವಣ್ಯ ಎನ್ನುವವರು ಉನ್ನತ ಶಿಕ್ಷಣಕ್ಕೆ ತೆರಳಿದರೆ, ತರಬೇತಿಗೆ ಬಂದ ವೈದ್ಯರೂ ರಜೆ ಮೇಲೆ ತೆರಳಿದ್ದಾರೆ. ಇದರಿಂದ ಜನರ ಕಷ್ಟ ಹೇಳತೀರದು. ಇರುವ ನರ್ಸ್ಗಳೇ ಸೇವೆ ನೀಡುತ್ತಿದ್ದು, ಜನ ಏನಾದರೂ ತೊಂದರೆಯಾದರೆ ಹೇಗೆ ಎನ್ನುವ ಭಯದಲ್ಲಿಯೇ ಆಸ್ಪತ್ರೆಗೆ ಬರುತ್ತಿದ್ಧಾರೆ.
ಈ ಕುರಿತು ಸ್ಥಳೀಯರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳೀಯ ಶಾಸಕ ಆರ್.ನರೇಂದ್ರ ಅವರಿಗೂ ವೈದ್ಯರ ಕೊರತೆಯಿಂದ ಆಗುತ್ತಿರುವ ತೊಂದರೆಯನ್ನು ಗಮನಕ್ಕೆ ತಂದರೂ ಅವರು ರಾಜಕೀಯ ಕಾರಣಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಕಾಮಗೆರೆಯ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಶಾಸಕರು ಸ್ವಗ್ರಾಮ ದೊಡ್ಡಿಂದುವಾಡಿ ಸಹಿತ ಬೇರೆ ಬೇರೆ ಊರುಗಳಿಗೆ ನೀಡುವ ಮಾನ್ಯತೆಯನ್ನು ಕಾಮಗೆರೆಗೂ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೇ ಜಿಲ್ಲಾಧಿಕಾರಿ ಡಾ.ಡಿ.ಎಸ್.ರಮೇಶ್, ಡಿಎಚ್ಒ ಡಾ.ವಿಶ್ವೇಶ್ವರಯ್ಯ ಅವರಿಗೂ ಕರೆ ಮಾಡಿ ವೈದ್ಯರನ್ನು ಕೂಡಲೇ ನಿಯೋಜಿಸುವಂತೆ ಕೋರಿದ್ದು, ಅದಕ್ಕೆ ಪೂರಕ ಸ್ಪಂದನೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ.
ಕಾಮಗೆರೆ ಗ್ರಾಮದ ಪಿಎಚ್ಸಿಗೆ ವೈದ್ಯರೇ ಇಲ್ಲ ಎನ್ನುವ ವಿಷಯ ಗಮನಕ್ಕೆ ಬಂದಿದೆ. ಕೂಡಲೇ ಡಿಎಚ್ಒ ಅವರಿಗೆ ತಿಳಿಸಿ ವೈದ್ಯರ ಸೇವೆ ಲಭ್ಯವಾಗುವಂತೆ ಮಾಡುತ್ತೇನೆ.
-ಡಾ.ಡಿ.ಎಸ್.ರಮೇಶ್, ಡಿಸಿ ಚಾಮರಾಜನಗರ
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…