ಜಿಲ್ಲೆಗಳು

ಕಾಮಗೆರೆ ಆಸ್ಪತ್ರೆಗೆ ವೈದ್ಯರೇ ಇಲ್ಲ !

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೂರು ನೀಡದೂ ಸಿಗದ ಸ್ಪಂದನೆ: ಸ್ಥಳೀಯರ ಆಕ್ರಂದನ

ಕಾಮಗೆರೆ: ಜಿಲ್ಲೆಯಲ್ಲೇ ಅತೀ ಹಳೆಯದಾದ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‌ಸಿ)ಕ್ಕೆ ಖಾಯಂ ವೈದ್ಯರೇ ಇಲ್ಲ. ಈ ಕುರಿತು ಸ್ಥಳೀಯ ಶಾಸಕ ನರೇಂದ್ರ ಸಹಿತ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ವೈದ್ಯರನ್ನು ನೇಮಿಸಿಲ್ಲ. ಇದರಿಂದ ಕಾಮಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಬಡವರಂತೂ ಹೆಚ್ಚು ಹಣ ನೀಡಲೂ ಆಗದೇ, ಸೂಕ್ತ ಸೌಲಭ್ಯವೂ ದೊರಕದೇ ಕಷ್ಟ ಅನುಭವಿಸುತ್ತಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ವ್ಯಾಪ್ತಿಯಲ್ಲಿದ್ದರೂ ಹನೂರು ವಿಧಾನಸಭಾ ಕ್ಷೇತ್ರದಡಿ ಬರುವ ಅತಿ ದೊಡ್ಡ ಊರು ಕಾಮಗೆರೆಗೆ1962 ರಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಯಿತು. ಈಗಂತೂ 10 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸೌಲಭ್ಯವನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದರು. ಇಲ್ಲಿ ಇಬ್ಬರು ವೈದ್ಯರ ಸೇವೆ ನೀಡಲಾಗಿತ್ತು. ಆದರೆ ಡಾ.ಲಾವಣ್ಯ ಎನ್ನುವವರು ಉನ್ನತ ಶಿಕ್ಷಣಕ್ಕೆ ತೆರಳಿದರೆ, ತರಬೇತಿಗೆ ಬಂದ ವೈದ್ಯರೂ ರಜೆ ಮೇಲೆ ತೆರಳಿದ್ದಾರೆ. ಇದರಿಂದ ಜನರ ಕಷ್ಟ ಹೇಳತೀರದು. ಇರುವ ನರ್ಸ್‌ಗಳೇ ಸೇವೆ ನೀಡುತ್ತಿದ್ದು, ಜನ ಏನಾದರೂ ತೊಂದರೆಯಾದರೆ ಹೇಗೆ ಎನ್ನುವ ಭಯದಲ್ಲಿಯೇ ಆಸ್ಪತ್ರೆಗೆ ಬರುತ್ತಿದ್ಧಾರೆ.
ಈ ಕುರಿತು ಸ್ಥಳೀಯರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳೀಯ ಶಾಸಕ ಆರ್.ನರೇಂದ್ರ ಅವರಿಗೂ ವೈದ್ಯರ ಕೊರತೆಯಿಂದ ಆಗುತ್ತಿರುವ ತೊಂದರೆಯನ್ನು ಗಮನಕ್ಕೆ ತಂದರೂ ಅವರು ರಾಜಕೀಯ ಕಾರಣಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಕಾಮಗೆರೆಯ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಶಾಸಕರು ಸ್ವಗ್ರಾಮ ದೊಡ್ಡಿಂದುವಾಡಿ ಸಹಿತ ಬೇರೆ ಬೇರೆ ಊರುಗಳಿಗೆ ನೀಡುವ ಮಾನ್ಯತೆಯನ್ನು ಕಾಮಗೆರೆಗೂ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೇ ಜಿಲ್ಲಾಧಿಕಾರಿ ಡಾ.ಡಿ.ಎಸ್.ರಮೇಶ್, ಡಿಎಚ್‌ಒ ಡಾ.ವಿಶ್ವೇಶ್ವರಯ್ಯ ಅವರಿಗೂ ಕರೆ ಮಾಡಿ ವೈದ್ಯರನ್ನು ಕೂಡಲೇ ನಿಯೋಜಿಸುವಂತೆ ಕೋರಿದ್ದು, ಅದಕ್ಕೆ ಪೂರಕ ಸ್ಪಂದನೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ.


ಕಾಮಗೆರೆ ಗ್ರಾಮದ ಪಿಎಚ್‌ಸಿಗೆ ವೈದ್ಯರೇ ಇಲ್ಲ ಎನ್ನುವ ವಿಷಯ ಗಮನಕ್ಕೆ ಬಂದಿದೆ. ಕೂಡಲೇ ಡಿಎಚ್‌ಒ ಅವರಿಗೆ ತಿಳಿಸಿ ವೈದ್ಯರ ಸೇವೆ ಲಭ್ಯವಾಗುವಂತೆ ಮಾಡುತ್ತೇನೆ.

-ಡಾ.ಡಿ.ಎಸ್.ರಮೇಶ್, ಡಿಸಿ ಚಾಮರಾಜನಗರ

andolanait

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

58 mins ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

1 hour ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

2 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

2 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

4 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

4 hours ago