ಜಿಲ್ಲೆಗಳು

ಕಾಮಗೆರೆ ಆಸ್ಪತ್ರೆಗೆ ವೈದ್ಯರೇ ಇಲ್ಲ !

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೂರು ನೀಡದೂ ಸಿಗದ ಸ್ಪಂದನೆ: ಸ್ಥಳೀಯರ ಆಕ್ರಂದನ

ಕಾಮಗೆರೆ: ಜಿಲ್ಲೆಯಲ್ಲೇ ಅತೀ ಹಳೆಯದಾದ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‌ಸಿ)ಕ್ಕೆ ಖಾಯಂ ವೈದ್ಯರೇ ಇಲ್ಲ. ಈ ಕುರಿತು ಸ್ಥಳೀಯ ಶಾಸಕ ನರೇಂದ್ರ ಸಹಿತ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೂ ವೈದ್ಯರನ್ನು ನೇಮಿಸಿಲ್ಲ. ಇದರಿಂದ ಕಾಮಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಬಡವರಂತೂ ಹೆಚ್ಚು ಹಣ ನೀಡಲೂ ಆಗದೇ, ಸೂಕ್ತ ಸೌಲಭ್ಯವೂ ದೊರಕದೇ ಕಷ್ಟ ಅನುಭವಿಸುತ್ತಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ವ್ಯಾಪ್ತಿಯಲ್ಲಿದ್ದರೂ ಹನೂರು ವಿಧಾನಸಭಾ ಕ್ಷೇತ್ರದಡಿ ಬರುವ ಅತಿ ದೊಡ್ಡ ಊರು ಕಾಮಗೆರೆಗೆ1962 ರಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಯಿತು. ಈಗಂತೂ 10 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಕಾಮಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸೌಲಭ್ಯವನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದರು. ಇಲ್ಲಿ ಇಬ್ಬರು ವೈದ್ಯರ ಸೇವೆ ನೀಡಲಾಗಿತ್ತು. ಆದರೆ ಡಾ.ಲಾವಣ್ಯ ಎನ್ನುವವರು ಉನ್ನತ ಶಿಕ್ಷಣಕ್ಕೆ ತೆರಳಿದರೆ, ತರಬೇತಿಗೆ ಬಂದ ವೈದ್ಯರೂ ರಜೆ ಮೇಲೆ ತೆರಳಿದ್ದಾರೆ. ಇದರಿಂದ ಜನರ ಕಷ್ಟ ಹೇಳತೀರದು. ಇರುವ ನರ್ಸ್‌ಗಳೇ ಸೇವೆ ನೀಡುತ್ತಿದ್ದು, ಜನ ಏನಾದರೂ ತೊಂದರೆಯಾದರೆ ಹೇಗೆ ಎನ್ನುವ ಭಯದಲ್ಲಿಯೇ ಆಸ್ಪತ್ರೆಗೆ ಬರುತ್ತಿದ್ಧಾರೆ.
ಈ ಕುರಿತು ಸ್ಥಳೀಯರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳೀಯ ಶಾಸಕ ಆರ್.ನರೇಂದ್ರ ಅವರಿಗೂ ವೈದ್ಯರ ಕೊರತೆಯಿಂದ ಆಗುತ್ತಿರುವ ತೊಂದರೆಯನ್ನು ಗಮನಕ್ಕೆ ತಂದರೂ ಅವರು ರಾಜಕೀಯ ಕಾರಣಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಕಾಮಗೆರೆಯ ಜನತೆ ಬೇಸರ ವ್ಯಕ್ತಪಡಿಸಿದ್ದಾರೆ. ಶಾಸಕರು ಸ್ವಗ್ರಾಮ ದೊಡ್ಡಿಂದುವಾಡಿ ಸಹಿತ ಬೇರೆ ಬೇರೆ ಊರುಗಳಿಗೆ ನೀಡುವ ಮಾನ್ಯತೆಯನ್ನು ಕಾಮಗೆರೆಗೂ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದಲ್ಲದೇ ಜಿಲ್ಲಾಧಿಕಾರಿ ಡಾ.ಡಿ.ಎಸ್.ರಮೇಶ್, ಡಿಎಚ್‌ಒ ಡಾ.ವಿಶ್ವೇಶ್ವರಯ್ಯ ಅವರಿಗೂ ಕರೆ ಮಾಡಿ ವೈದ್ಯರನ್ನು ಕೂಡಲೇ ನಿಯೋಜಿಸುವಂತೆ ಕೋರಿದ್ದು, ಅದಕ್ಕೆ ಪೂರಕ ಸ್ಪಂದನೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ.


ಕಾಮಗೆರೆ ಗ್ರಾಮದ ಪಿಎಚ್‌ಸಿಗೆ ವೈದ್ಯರೇ ಇಲ್ಲ ಎನ್ನುವ ವಿಷಯ ಗಮನಕ್ಕೆ ಬಂದಿದೆ. ಕೂಡಲೇ ಡಿಎಚ್‌ಒ ಅವರಿಗೆ ತಿಳಿಸಿ ವೈದ್ಯರ ಸೇವೆ ಲಭ್ಯವಾಗುವಂತೆ ಮಾಡುತ್ತೇನೆ.

-ಡಾ.ಡಿ.ಎಸ್.ರಮೇಶ್, ಡಿಸಿ ಚಾಮರಾಜನಗರ

andolanait

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

1 hour ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

1 hour ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

1 hour ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

1 hour ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

12 hours ago