ಜಿಲ್ಲೆಗಳು

ಕೃಷಿ ಇಲಾಖೆ ಜತೆ ರೇಷ್ಮೆ ಇಲಾಖೆ ವಿಲೀನ ಇಲ್ಲ

ಯಥಾಸ್ಥಿತಿ ಕಾಪಾಡುತ್ತೇವೆ: ಶಾಸಕ ದಿನೇಶ್ ಗೂಳಿಗೌಡರಿಗೆ ಸಚಿ ನಾರಾಯಣಗೌಡ ಪತ್ರ

ಮಂಡ್ಯ: ಕೃಷಿ ಇಲಾಖೆ ಜತೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಸಂಬAಧ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದನ್ನು ಪರಿಶೀಲಿಸಿದ್ದು, ಯಥಾಸ್ಥಿತಿ ಕಾಪಾಡಲು ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿದ್ದಾಗಿ ರೇಷ್ಮೆ ಸಚಿವ ಡಾ. ಕೆ.ಸಿ.ನಾರಾಯಣಗೌಡ ಅವರು ಪತ್ರ ಬರೆದು ತಿಳಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ರೇಷ್ಮೆ ಇಲಾಖೆಯನ್ನು ವಿಲೀನ ಮಾಡಿದ್ದೇ ಆದರೆ ರೇಷ್ಮೆ ಬೆಳಗಾರರಿಗೆ ತೀವ್ರ ಸಂಕಷ್ಟ ಎದುರಾಗಲಿದೆ. ಇದು ರೈತರಿಗೆ ಮಾರಕವಾದ ಕ್ರಮ ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ ಸಚಿವ ಡಾ. ನಾರಾಯಣಗೌಡ ಅವರಿಗೆ ಪತ್ರ ಬರೆದು ಸಮಸ್ಯೆಗಳ ಬಗ್ಗೆ ವಿವರವಾಗಿ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರಿಗೆ ಪತ್ರ ಬರೆದಿರುವ ಸಚಿವ ನಾರಾಯಣಗೌಡರು, ಯಥಾಸ್ಥಿತಿ ಕಾಪಾಡುವ ಬಗ್ಗೆ ಪರಿಶೀಲನೆ ನಡೆಸಿ, ಯಥಾಸ್ಥಿತಿಗೆ ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶಾಸಕ ದಿನೇಶ್ ಗೂಳಿಗೌಡರ ಮನವಿಯಲ್ಲೇನಿತ್ತು?

ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ರಾಜ್ಯ ಸರ್ಕಾರವು ಇತ್ತೀಚೆಗೆ ರೇಷ್ಮೇ ಇಲಾಖೆ, ತೋಟಗಾರಿಕೆ ಇಲಾಖೆಯನ್ನು ಮತ್ತು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುತ್ತಿರುವುದಾಗಿ ತಿಳಿದು ಬಂದಿರುತ್ತದೆ. ರೈತರು ದೇಶದ ಬೆನ್ನೆಲುಬಾಗಿದ್ದು, ಸರ್ಕಾರ ಏಕಾಏಕಿ ಈ ಇಲಾಖೆಗಳನ್ನು ವಿಲೀನಗೊಳಿಸಿದರೆ ರೈತರಿಗೆ ಮಾರಕವಾಗುವ ಸಂಭವವಿದೆ, ರಾಜ್ಯದಲ್ಲಿ ಹೈನುಗಾರಿಕೆಯು ಪ್ರಥಮ ಸ್ಥಾನದಲ್ಲಿದ್ದರೆ ರೇಷ್ಮೆ ಬೆಳೆಯು ದ್ವಿತೀಯ ಸ್ಥಾನದಲ್ಲಿದೆ. ಅಲ್ಲದೆ, ಇದು ರೈತರ ವಾಣಿಜ್ಯ ಬೆಳೆಯಾಗಿದ್ದು, ಅವರ ಆದಾಯಕ್ಕೆ ಅನುಕೂಲವಾಗಿದೆ. ಕರ್ನಾಟಕ ರಾಜ್ಯದ ರೇಷ್ಮೇಯು ದೇಶಾದ್ಯಂತ ಹೆಸರುವಾಸಿಯಾಗಿದ್ದು, ಇಂತಹ ಸಂದರ್ಭದಲ್ಲಿ ರೇಷ್ಮೆ ಇಲಾಖೆಯನ್ನು ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡುವ ಬದಲು ವಿಲೀನಗೊಳಿಸುತ್ತಿರುವ ಪ್ರಕ್ರಿಯೆಯನ್ನು ತಕ್ಷಣವೇ ತಡೆಯುವುದು ಅವಶ್ಯಕವಾಗಿದೆ.

ರಾಜ್ಯದ ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ರೇಷ್ಮೆ ಬೆಳೆಯನ್ನೇ ಅವಲಂಬಿಸಿರುವ ಲಕ್ಷಾಂತರ ರೈತ ಕುಟುಂಬಗಳು ಹಾಗೂ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಈ ಮೂರು ಇಲಾಖೆಗಳ ವಿಲೀನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಹಾಗೂ ರೇಷ್ಮೆ ಇಲಾಖೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಮತ್ತು ರೇಷ್ಮೆ ಕೃಷಿ ಪದವಿ ಪಡೆದು ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಬೇಕು, ರೇಷ್ಮೆ ಬೆಳೆಯ ಅಭಿವೃಧ್ಧಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿ ರೈತರ ಸಂಕಷ್ಟವನ್ನು ನಿವಾರಿಸಲು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ ಸಚಿವ ನಾರಾಯಣಗೌಡ ಅವರಿಗೆ ಪತ್ರ ಬರೆದು ಕೋರಿದ್ದರು.
ರೇಷ್ಮೆ ಬೆಳೆಗಾರರ ಸಂಕಷ್ಟದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸರ್ಕಾರವು ಈಗ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.

andolana

Recent Posts

ನಾಳೆ 17ನೇ ಐತಿಹಾಸಿಕ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ…

19 mins ago

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

6 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

6 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

6 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

7 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

7 hours ago