ಜಿಲ್ಲೆಗಳು

ಮೈಸೂರಿನ ಸಂಸ್ಕೃತಿ ಬಗ್ಗೆ ಎಲ್ಲೆಡೆಯು ಚರ್ಚೆಯಗಬೇಕು : ಡಾ. ಎಚ್. ಸಿ ಮಹದೇವಪ್ಪ

ಮೈಸೂರು : ನಮ್ಮ ಸಂಸ್ಕೃತಿ ಕಲೆ, ಸಂಪ್ರದಾಯದ, ಧಾರ್ಮಿಕತೆಯ ಬಗ್ಗೆ ಹೊರಗಿನ ಜನರಿಗೆ ತಿಳಿಸಿ ಅದು ಎಲ್ಲೆಡೆಯು ಚರ್ಚೆಯಾಗುವಂತೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹದೇವಪ್ಪನವರು ಹೇಳಿದರು.

ಇಂದು ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಆಯೋಜಿಸಿದ್ದ ಮೈಸೂರು ಫೆಸ್ಟ್ ಚಿತ್ರಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರಿನ ಹಬ್ಬದ ಜಾತ್ರೆಯನ್ನು ಪ್ರವಾಸೋದ್ಯಮ ಇಲಾಖೆಯವರು ಪ್ರಾರಂಭಿಸಿದ್ದಾರೆ.ನಗರ ಸಭೆ ,ಪುರಸಭೆ ,ನಗರ ಪಟ್ಟಣದಲ್ಲಿ ಸಂಚರಿಸಿ ಕಲೆ, ವಿನ್ಯಾಸ, ಚಿತ್ರಸಂತೆ ಮೂಲಕ ಪ್ರವಾಸೋದ್ಯಮವನ್ನು ಉತ್ತೇಜಸಬೇಕು ಎಂದರು.ಮೈಸೂರು ಫೆಸ್ಟ್ ಅನ್ನು ಬ್ರಾಂಡ್ ಮೈಸೂರು ಫೆಸ್ಟ್ ಆಗಿ ಮಾಡಬೇಕು.

ದೇಶ ಸುತ್ತಿ ಕೋಶ ಓದು ಎಂಬ ಮಾತಿನಂತೆ ಎಲ್ಲದರ ಬಗ್ಗೆಯೂ ತಿಳಿದುಕೊಳ್ಳಬೇಕು. ಈ ಹಬ್ಬ ನಿರಂತರವಾಗಿ ನಡೆಯಬೇಕು ಇದರಿಂದ ಕಲಾವಿದರಿಗೆ ಹೆಚ್ಚಿನ ಅವಕಾಶ ಸಿಗುವಂತೆ ಆಗುತ್ತದೆ ಎಂದರು.

ಇಂದು ರಾಷ್ಟ್ರಕ್ಕೆ 75 ನೇ ಗಣರಾಜ್ಯೋತ್ಸವ ಇದು ಜನರ ಉತ್ಸವ ಜನರ ಅನಿಸಿಕೆಗಳನ್ನ ಹೇಳಿಕೊಳ್ಳುವುದಕ್ಕೆ ನಮಗೆ ನಾವೇ ಸಂವಿಧಾನವನ್ನ ರಚಿಸಿಕೊಂಡ ದಿನ.

ಸಂವಿಧಾನದ ಎಲ್ಲಾ ತತ್ವಗಳು ಯಥಾವತ್ತಾಗಿ ಜಾರಿಯಾದರೆ ಜಾತ್ಯತೀತ, ಸಮಾಜವಾದಿ, ಸಾರ್ವಭೌವ, ಗಣತಂತ್ರವಾದ ಸಂವೃದ್ಧ ಭಾರತ ನಿರ್ಮಾಣವಾಗಲಿದೆ.

ಇದನ್ನು ಅಳವಡಿಸಿಕೊಂಡರೆ ಯಾವುದೇ ಬೇಧ-ಭಾವ ಇಲ್ಲದೆ ಎಲ್ಲಾ ಯುವ ಮನಸ್ಸುಗಳನ್ನು ಒಂದೆಡೆ ತರುವ ಸಂವಿಧಾನ ಜಾಗೃತಿ ಸಮಾವೇಶವನ್ನು ಮಾಡುತ್ತಿದ್ದೇವೆ.

ಇದಕ್ಕೆ ಎಲ್ಲರೂ ಸಹಕರಿಸಬೇಕು. ಭಾರತದಲ್ಲಿ ವಾಸಿಸುತ್ತಿರುವ 140 ಕೋಟಿ ಜನರು ಭಾರತೀಯರೇ ಅದನ್ನು ಒತ್ತಿ ಹೇಳುವ ಸಂವಿಧಾನವನ್ನು ಅಳವಡಿಸಿಕೊಳ್ಳಬೇಕು.

ಸಂವಿಧಾನ ಎಲ್ಲರನ್ನು ರಕ್ಷಿಸಲು ಇದೆ ಇದು ಯಾವುದೇ ಜಾತಿ, ಸಮುದಾಯದ ರಕ್ಷಣೆಗೆ ಸೀಮಿತವಾಗಿಲ್ಲ ಎಂದು ಹೇಳಿದರು.

ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಅವರೂ ಮಾತನಾಡಿ ಮೈಸೂರು ದಸರಾ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಕಾರಣಾಂತರಗಳಿಂದ ಮಾಡಲು ಸಾಧ್ಯವಾಗಲಿಲ್ಲ.

ಆದರೆ ಈ ಸಮಯದಲ್ಲಿ ಪ್ರವಾಸೋದ್ಯಮ ಇಲಾಖೆಯೊಂದಿಗೆ ಕೈಜೋಡಿಸಿ ಟೂರಿಸಮ್ ಕ್ಯಾಲೆಂಡರ್ ಅನ್ನು ಹೊರತರುತ್ತಿದ್ದೇವೆ. ಈ ಉತ್ಸವವು ಸ್ಥಳೀಯ ಹಾಗೂ ಅಂತರ ರಾಷ್ಟೀಯ ಕಲಾವಿದರ ಮಾರುಕಟ್ಟೆಗೆ ಅವಕಾಶ ಕಲ್ಪಿಸಿಕೊಟ್ಟಿದೆ.

ಇಂದಿನ ಯುವಜನರಿಗೆ ನಮ್ಮ ಕಲೆಯ ಹಾಗೂ ಸಂಸ್ಕೃತಿಯ ಬಗ್ಗೆ ತಿಳಿಸಿ

 

ಕೊಡಲು ಮೈಸೂರು ಫೆಸ್ಟ್ ಒಂದು ಬ್ರಿಡ್ಜ್ ಆಗಿದೆ.ದಸರಾ ಸಂದರ್ಭದಲ್ಲಿ ಪ್ರವಾಸಿ ಚಟುವಟಿಕೆಗಳಿಗಾಗಿ ಬಿಡುಗಡೆಯಗಿದ್ದ ಹಣವನ್ನು ಈ ಸಂದರ್ಭದಲ್ಲಿ ಬಳಸಿಕೊಂಡು ಚಿತ್ರಸಂತೆ, ಸ್ಥಳೀಯ ಕಲೆಗಳ ಪ್ರದರ್ಶನ, ಆಹಾರಮೇಳ ಹಾಗೂ ಮೂರು ದಿನಗಳು ವಿಶ್ವ ಪ್ರಸಿದ್ಧ ಅಂತರ್ರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮಗಳು ನಡೆಯುತ್ತಿದ್ದು ಮೈಸೂರು ದಸರಾ ಮಾರುಕಳುಹಿಸುತ್ತಿದೆ ಎಂದರೆ ತಪ್ಪಾಗಲಾರದು.

ಬಂದಿರುವಂತಹ ಪ್ರವಾಸಿಗರಿಗೆ ಮೈಸೂರಿನ ಎನ್ನಷ್ಟು ವಿಶೇಷ ವಿಷಯಗಳನ್ನು ತಿಳಿದುಕೊಳ್ಳಲು ಇದು ಸಹಕಾರಿಯಾಗಲಿದೆ. ಮೈಸೂರು ಜನತೆ ಕಾರ್ಯಕ್ರಮದಲ್ಲಿ ಭಾಗವಸಿಯುತ್ತಿರುವ ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಕಲಾವಿದರ ಕಲೆಯನ್ನ ಬೆಳೆಸಿ ಪ್ರೋತ್ಸಾಹ ನೀಡಬೇಕು.

ಮಕ್ಕಳಲ್ಲಿರುವ ಕಲೆಯನ್ನ ಅನಾವರಣ ಮಾಡುವ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಇದ್ದಕ್ಕೆ ಎಲ್ಲರೂ ಸಹಕರಿಸಬೇಕು.
ಫೆಸ್ಟ್ ಅನ್ನು ಯಶಸ್ವಿಯಾಗಿ ಮಾಡುವುದರ ಮೂಲಕ ನಿರಂತರವಾಗಿ ನಡೆಯಲು ಪ್ರೋತ್ಸಾಹ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಸದಸ್ಯರಾದ ತನ್ವಿರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಮರೀತೀಬ್ಬೆಗೌಡ, ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ, ಜಿಲ್ಲಾ ಪೊಲೀಸ್ ಆಯುಕ್ತರಾದ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಡಾ. ಕೆ. ಎಂ ಗಾಯಿತ್ರಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಕೆ ಎಂ ಸವಿತಾ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ. ಕೆ ಹರೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

1 hour ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

1 hour ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

2 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

2 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

3 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

3 hours ago