ಜಿಲ್ಲೆಗಳು

ನನ್ನ ಕೈಯಲ್ಲಿ ಕೋಲು ತರಿಸಿ ನನಗೇ ಹೊಡೆಯುತ್ತಿದ್ದರು : ದೊಡ್ಡಣ್ಣನ ನೆನಪು

ಮೈಸೂರು: ಗುರುಗಳು ಕೋಲು ತರಲು ಹೇಳುತ್ತಿದ್ದರು. ಯಾರಿಗೋ ಹೊಡೆಯಲು ಬೇಕೆಂದು ಕೇಳುತ್ತಿದ್ದರು. ಅದು ನಾನೇ ಆಗಿದ್ದೆ. ನಾನೇ ಕೋಲು ಕೊಟ್ಟು ಹೊಡೆಸಿಕೊಳ್ಳುತ್ತಿದ್ದ ಭಾಗ್ಯ ನನ್ನದಾಗಿತ್ತು..

ಹೀಗೆಂದು ತಮ್ಮ ನಾಟಕ ಕಲಿಕೆಯ ದಿನಗಳನ್ನು ಸ್ಮರಿಸಿದ ಹಿರಿಯ ನಟ ದೊಡ್ಡಣ್ಣ ಅವರು, ಅಂದು ಗುರುಗಳು ಕಲಿಸಿದ ಭಾಷೆ ಮತ್ತು ನಟನೆಯ ಆರಂಭಿಕ ಕಲಿಕೆ ಇಂದು ತಮ್ಮನ್ನು ರೂಪಿಸಿವೆ ಎಂದು ನೆನಪುಗಳನ್ನು ಮೆಲುಕು ಹಾಕಿದರು.
ರಂಗಾಯಣದ ಭೂಮಿಗೀತದಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಗಂಧದಗುಡಿ ಚಿತ್ರದ ಪ್ರದರ್ಶನದ ಮೂಲಕ ಬಹುರೂಪಿ ಚಲನಚಿತ್ರೋತ್ಸವಕ್ಕೆ ಶುಕ್ರವಾರ ಅವರು ಚಾಲನೆ ನೀಡಿ ಮಾತನಾಡಿದರು.

ಮಾತಿನ ಮಧ್ಯೆ ಪೌರಾಣಿಕ ನಾಟಕಗಳ ಡೈಲಾಗ್‌ಗಳನ್ನು ಹೊಡೆಯುತ್ತಾ, ಹಾಸ್ಯಮಯವಾಗಿ ಮಾತಾಡುತ್ತಾ ನೆರೆದಿದ್ದವರನ್ನು ತನ್ನತ್ತ ಸೆಳೆದು ನಗಿಸಿ-ನಲಿಸಿದ ದೊಡ್ಡಣ್ಣ ತಾವು ರಂಗಭೂಮಿಯಲ್ಲಿ ಬೆಳೆದ ಬಗೆಯನ್ನು ವಿವರಿಸಿದರು.
ಪ್ರತಿ ಜಿಲ್ಲೆಯಲ್ಲಿಯೂ ರಂಗಾಯಣದಂತಹ ಸಂಸ್ಥೆಗಳು ಆಗಬೇಕು. ಇದಕ್ಕೆ ಜಾಗ ಸೇರಿದಂತೆ ಅಗತ್ಯ ಸೌಲಭ್ಯವನ್ನು ಸರ್ಕಾರ ಒದಗಿಸಬೇಕು. ನಟನಿಗೆ ವೀಕ್ಷಕರ ಹೃದಯ ತಟ್ಟುವ ಗುಣವಿರಬೇಕು. ನಾಟಕದಲ್ಲಿ ಸಾಧನೆ ಮಾಡಿದವರು ಎಲ್ಲಿ ಹೋದರೂ ಬದುಕುತ್ತಾರೆ ಎಂದು ದೊಡ್ಡಣ್ಣ ಹೇಳಿದರು.

ಭಾರತೀಯ ಚಿತ್ರರಂಗದಲ್ಲಿ ಡಾ.ರಾಜಕುಮಾರ್ ಅವರಿಗೆ ಸಿಕ್ಕಷ್ಟು ಮತ್ತು ಒಪ್ಪುವಷ್ಟು ವೈವಿಧ್ಯಮಯ ಪಾತ್ರಗಳು ಬೇರೆ ಯಾರಿಗೂ ಸಲ್ಲಲಿಲ್ಲ. ಹಾಗಾಗಿಯೇ ಭಾರತದ ಎಲ್ಲ ಚಿತ್ರರಂಗದವರ ಗೌರವಕ್ಕೆ ಅವರು ಪ್ರೀತಿಗೆ ಪಾತ್ರರಾದರು. ಈ ನಮ್ಮ ಮಣ್ಣಿನಲ್ಲಿ ಧಮ್ ಇದೆ, ತ್ಯಾಗದ ಗುಣವಿದೆ. ಈ ಮಣ್ಣಿನಲ್ಲಿ ಇದ್ದರು ಎನ್ನಲಾದ ರಾಕ್ಷಸರಿಗೂ ತ್ಯಾಗದ ಗುಣವಿತ್ತು ಎಂದು ರಾವಣನನ್ನು ಉದಾಹರಿಸಿ ಹೇಳಿದರು. ಇಂತಹ ಮಣ್ಣಿನಲ್ಲಿ ಹುಟ್ಟಿರುವ ನಾವೆಲ್ಲರೂ ಶುದ್ಧ ಭಾರತೀಯರು ಎಂಬುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಆರೋಗ್ಯವಾಗಿರಬೇಕು ಎಂದರೆ ದೇಹಕ್ಕೆ ಕೆಲಸ ಎಷ್ಟು ಮುಖ್ಯವೋ, ಜ್ಞಾನ ಹೆಚ್ಚಾಗಬೇಕು ಎಂದರೆ ತಲೆಗೆ ಕೆಲಸ ಕೊಡಬೇಕು. ಹಾಗಾಗಿ, ಎಲ್ಲರೂ ಹೆಚ್ಚು ಹೆಚ್ಚು ಓದಬೇಕು. ಕನ್ನಡ ಭಾಷೆಯಲ್ಲಿ ಪ್ರತಿ ಪದಕ್ಕೂ 30ಕ್ಕೂ ಹೆಚ್ಚು ಪಾರಿಭಾಷಿಕ ಪದಗಳು ಸಿಗುತ್ತವೆ. ನಮ್ಮ ಭಾಷೆ ಸಮೃದ್ಧವಾಗಿದೆ. ಹಾಗಾಗಿ, ಕೇವಲ ಇಂಗ್ಲಿಷ್‌ಗೆ ಮಾತ್ರ ಆದ್ಯತೆ ನೀಡಬೇಡಿ. ತಮ್ಮ ಮಕ್ಕಳಿಗೆ ಕನ್ನಡವನ್ನೂ ಕಲಿಸಿ. ತಮ್ಮ ಮಕ್ಕಳಿಗೆ ಕನ್ನಡ ಸಾಹಿತ್ಯ-ಕಲೆಯ ಬಗ್ಗೆ ಅರಿವು ಮೂಡಿಸಿ ಎಂದು ಕಿವಿಮಾತು ಹೇಳಿದರು.
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ ಕಶ್ಯಪ್, ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ, ಉಪ ನಿರ್ದೇಶಕಿ ನಿರ್ಮಲಾ ಮಠಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಸಂಚಾಲಕರಾದ ಕೆ.ಮನು, ಬಿ.ಎನ್.ಶಶಿಕಲಾ ಹಾಜರಿದ್ದರು.

 

andolana

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

4 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

4 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

4 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

4 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

4 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

5 hours ago