ತಿ. ನರಸೀಪುರ: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.
ಶುಕ್ರವಾರ ಮಧ್ಯಾಹ್ನ ರೈತರು ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಅಧಿಕಾರಿಗಳು ಈಗ ಮರಿ ಚಿರತೆಗಳನ್ನು ಬೋನಿನಲ್ಲಿಟ್ಟು ತಾಯಿ ಚಿರತೆಯನ್ನು ಹಿಡಿಯುವ ಪ್ರಯತ್ನ ನಡೆಸಿದ್ದಾರೆ. ಮೂರೂ ಮರಿಗಳನ್ನು ಒಂದೇ ಬೋನಿನಲ್ಲಿ ಇರಿಸಲಾಗಿದ್ದು ತಾಯಿ ಚಿರತೆ ಇವುಗಳನ್ನು ಹುಡುಕಿಕೊಂಡು ಬರುವ ನಿರೀಕ್ಷೆ ಇದೆ.
ತಾಲೂಕಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಚಿರತೆಗಳನ್ನು ಸೆರೆ ಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಈ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ಮರಿಗಳ ಜತೆ ಇರುತ್ತಿದ್ದರೆ ರೈತರ ಮೇಲೆ ದಾಳಿ ಮಾಡುವ ಸಂಭವ ಇತ್ತು. ಆದರೆ ಅದು ಗ್ರಾಮಸ್ಥರ ಸದ್ದು ಕೇಳಿ ಚಿರತೆ ಸುರಕ್ಷಿತ ಸ್ಥಳಕ್ಕೆ ಪಲಾಯನ ಮಾಡಿದೆ.
ಚಿರತೆಗಳು ಊರೊಳಗೆ ಬಂದು ಕಬ್ಬಿನ ಗದ್ದೆಯಲ್ಲಿ ಮರಿ ಹಾಕುತ್ತಿವೆ ಎಂಬ ಗ್ರಾಮಸ್ಥರ ಹೇಳಿಕೆ ನಿಜವಾಗಿದ್ದು ಕಬ್ಬಿನ ಗದ್ದೆ ಕಟಾವಿಗೆ ಸಿದ್ದವಾಗಿರುವ ರೈತರಲ್ಲಿ ಆತಂಕ ಮೂಡಿಸಿದೆ.
ಎರಡು ವಾರಗಳ ಹಿಂದಷ್ಟೇ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಗೆ ಬಲಿಯಾಗಿದ್ದಳು. ಇದಕ್ಕೂ ಮುನ್ನ ಮಹಾರಾಜ ಕಾಲೇಜು ವಿದ್ಯಾರ್ಥಿಯೊಬ್ಬ ಚಿರತೆ ದಾಳಿಯಲ್ಲಿ ಮೃತಪಟ್ಟಿದ್ದ.
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…