ತಿ. ನರಸೀಪುರ: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.
ಶುಕ್ರವಾರ ಮಧ್ಯಾಹ್ನ ರೈತರು ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಅಧಿಕಾರಿಗಳು ಈಗ ಮರಿ ಚಿರತೆಗಳನ್ನು ಬೋನಿನಲ್ಲಿಟ್ಟು ತಾಯಿ ಚಿರತೆಯನ್ನು ಹಿಡಿಯುವ ಪ್ರಯತ್ನ ನಡೆಸಿದ್ದಾರೆ. ಮೂರೂ ಮರಿಗಳನ್ನು ಒಂದೇ ಬೋನಿನಲ್ಲಿ ಇರಿಸಲಾಗಿದ್ದು ತಾಯಿ ಚಿರತೆ ಇವುಗಳನ್ನು ಹುಡುಕಿಕೊಂಡು ಬರುವ ನಿರೀಕ್ಷೆ ಇದೆ.
ತಾಲೂಕಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಚಿರತೆಗಳನ್ನು ಸೆರೆ ಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಈ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ಮರಿಗಳ ಜತೆ ಇರುತ್ತಿದ್ದರೆ ರೈತರ ಮೇಲೆ ದಾಳಿ ಮಾಡುವ ಸಂಭವ ಇತ್ತು. ಆದರೆ ಅದು ಗ್ರಾಮಸ್ಥರ ಸದ್ದು ಕೇಳಿ ಚಿರತೆ ಸುರಕ್ಷಿತ ಸ್ಥಳಕ್ಕೆ ಪಲಾಯನ ಮಾಡಿದೆ.
ಚಿರತೆಗಳು ಊರೊಳಗೆ ಬಂದು ಕಬ್ಬಿನ ಗದ್ದೆಯಲ್ಲಿ ಮರಿ ಹಾಕುತ್ತಿವೆ ಎಂಬ ಗ್ರಾಮಸ್ಥರ ಹೇಳಿಕೆ ನಿಜವಾಗಿದ್ದು ಕಬ್ಬಿನ ಗದ್ದೆ ಕಟಾವಿಗೆ ಸಿದ್ದವಾಗಿರುವ ರೈತರಲ್ಲಿ ಆತಂಕ ಮೂಡಿಸಿದೆ.
ಎರಡು ವಾರಗಳ ಹಿಂದಷ್ಟೇ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಗೆ ಬಲಿಯಾಗಿದ್ದಳು. ಇದಕ್ಕೂ ಮುನ್ನ ಮಹಾರಾಜ ಕಾಲೇಜು ವಿದ್ಯಾರ್ಥಿಯೊಬ್ಬ ಚಿರತೆ ದಾಳಿಯಲ್ಲಿ ಮೃತಪಟ್ಟಿದ್ದ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…