ತಿ. ನರಸೀಪುರ: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.
ಶುಕ್ರವಾರ ಮಧ್ಯಾಹ್ನ ರೈತರು ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಅಧಿಕಾರಿಗಳು ಈಗ ಮರಿ ಚಿರತೆಗಳನ್ನು ಬೋನಿನಲ್ಲಿಟ್ಟು ತಾಯಿ ಚಿರತೆಯನ್ನು ಹಿಡಿಯುವ ಪ್ರಯತ್ನ ನಡೆಸಿದ್ದಾರೆ. ಮೂರೂ ಮರಿಗಳನ್ನು ಒಂದೇ ಬೋನಿನಲ್ಲಿ ಇರಿಸಲಾಗಿದ್ದು ತಾಯಿ ಚಿರತೆ ಇವುಗಳನ್ನು ಹುಡುಕಿಕೊಂಡು ಬರುವ ನಿರೀಕ್ಷೆ ಇದೆ.
ತಾಲೂಕಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಚಿರತೆಗಳನ್ನು ಸೆರೆ ಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಈ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ಮರಿಗಳ ಜತೆ ಇರುತ್ತಿದ್ದರೆ ರೈತರ ಮೇಲೆ ದಾಳಿ ಮಾಡುವ ಸಂಭವ ಇತ್ತು. ಆದರೆ ಅದು ಗ್ರಾಮಸ್ಥರ ಸದ್ದು ಕೇಳಿ ಚಿರತೆ ಸುರಕ್ಷಿತ ಸ್ಥಳಕ್ಕೆ ಪಲಾಯನ ಮಾಡಿದೆ.
ಚಿರತೆಗಳು ಊರೊಳಗೆ ಬಂದು ಕಬ್ಬಿನ ಗದ್ದೆಯಲ್ಲಿ ಮರಿ ಹಾಕುತ್ತಿವೆ ಎಂಬ ಗ್ರಾಮಸ್ಥರ ಹೇಳಿಕೆ ನಿಜವಾಗಿದ್ದು ಕಬ್ಬಿನ ಗದ್ದೆ ಕಟಾವಿಗೆ ಸಿದ್ದವಾಗಿರುವ ರೈತರಲ್ಲಿ ಆತಂಕ ಮೂಡಿಸಿದೆ.
ಎರಡು ವಾರಗಳ ಹಿಂದಷ್ಟೇ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಗೆ ಬಲಿಯಾಗಿದ್ದಳು. ಇದಕ್ಕೂ ಮುನ್ನ ಮಹಾರಾಜ ಕಾಲೇಜು ವಿದ್ಯಾರ್ಥಿಯೊಬ್ಬ ಚಿರತೆ ದಾಳಿಯಲ್ಲಿ ಮೃತಪಟ್ಟಿದ್ದ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…